Webdunia - Bharat's app for daily news and videos

Install App

ನಾನು ಸಿಎಂ ಆಕಾಂಕ್ಷಿಯಲ್ಲ ಅಂತ ಪ್ರಭಾವಿ ಸಚಿವ ಹೇಳಿದ್ದೇಕೆ?

Webdunia
ಗುರುವಾರ, 6 ಡಿಸೆಂಬರ್ 2018 (16:19 IST)
ನಾನು ಸಮ್ಮಿಶ್ರ ಸರ್ಕಾರದ ಆಶಯಕ್ಕೆ ಧಕ್ಕೆ ತಂದಿಲ್ಲ. ನಾನು ಸಿಎಂ ಆಕಾಂಕ್ಷಿಯಲ್ಲ ಅಂತ ಪ್ರಭಾವಿ ಸಚಿವರು ಹೇಳಿಕೆ ನೀಡಿದ್ದಾರೆ.

ನನ್ನ ಕಡೆಯಿಂದ ಕಾಂಗ್ರೆಸ್ ನವರಿಗೆ ತೊಂದರೆ ಆಗಿಲ್ಲ. ಈ ಬಗ್ಗೆ ಸಿದ್ದರಾಮಯ್ಯ ಸೇರಿ ಯಾವುದೇ ನಾಯಕರು ಕೇಳಿದರೆ ಉತ್ತರ ಕೊಡಲು ಸಿದ್ಧನಾಗಿದ್ದೇನೆ. ನಾನು ಸಮ್ಮಿಶ್ರ ಸರ್ಕಾರದ ಆಶಯಕ್ಕೆ ಧಕ್ಕೆ ತಂದಿಲ್ಲ. ವರ್ಗಾವಣೆ ಸೇರಿ ಯಾವುದೇ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ. ಬೇಕಿದ್ದರೆ ಸಮನ್ವಯ ಸಮಿತಿ ಸಭೆಯಲ್ಲೇ ವಿವರಿಸಿ ಹೇಳುವೆ. ಹೀಗಂತ ಹಾಸನದಲ್ಲಿ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

ಬದುಕಿರುವವರೆಗೂ ನಾನು ಕುಮಾರಸ್ವಾಮಿ ಹೊಡೆದಾಡಲ್ಲ. ಸೋದರರು ಕಚ್ಚಾಡುತ್ತಾರೆ ಎಂದುಕೊಂಡಿದ್ರೆ ಅದು ಭ್ರಮೆ. ನಾನು ಸಿಎಂ ಆಕಾಂಕ್ಷಿಯಲ್ಲ ಎಂದು ಸ್ಪಷ್ಟನೆ ನೀಡಿದರು.  
ಮಾಜಿ ಸಚಿವ ಕಾಂಗ್ರೆಸ್ ನ ಬಿ.ಶಿವರಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೇವಣ್ಣ, ಹಾಸನಕ್ಕೆ ಕಾಂಗ್ರೆಸ್ ಅವಧಿಯಲ್ಲಿ ಮಂಜೂರಾಗಿರುವ ಕಾಮಗಾರಿಗಳ ಆದೇಶದ ಪ್ರತಿ ತೋರಿಸಲಿ. ನಾನು‌ ಕೇಂದ್ರದ ಜೊತೆ ಕಳೆದ 4 ವರ್ಷದಿಂದ ಪ್ರಯತ್ನ ಮಾಡಿ ತಂದಿರುವ ಯೋಜನೆಯಿದೆ. ಹೆದ್ದಾರಿ ಯೋಜನೆಗಳಿಗೆ  ರಾಜ್ಯ ಸರಕಾರ 10 ರೂ. ಕೊಡಲ್ಲ. ವಿಷಯ ಗೊತ್ತಿದ್ದರೆ ಮಾತಾಡಲಿ ಎಂದು ಶಿವರಾಂಗೆ ಟಾಂಗ್ ನೀಡಿದರು.

ಬಿ.ಎಸ್.ಯಡಿಯೂರಪ್ಪ ತಮ್ಮ ಅವಧಿಯಲ್ಲಿ ಹಾಸನಕ್ಕೆ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂದು ಪ್ರಶ್ನೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments