Webdunia - Bharat's app for daily news and videos

Install App

ಕಾಂಗ್ರೆಸ್ ಯಾರನ್ನೂ ಕೈ ಬಿಡಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದೇಕೆ?

Webdunia
ಭಾನುವಾರ, 24 ಜೂನ್ 2018 (22:44 IST)
ಕಾಂಗ್ರೆಸ್ ಯಾರನ್ನೂ ಕೈ ಬಿಡಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದೇಕೆ?
ಮಂಡ್ಯ: ಸಚಿವಸ್ಥಾನ ಸಿಗದೇ ಕೆಲವು ನಾಯಕರು ಅಸಮಧಾನಗೊಂಡಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಯಾರನ್ನೂ ಕೈಬಿಡುವುದಿಲ್ಲ ಎಂದು ಆಹಾರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ತೆರಳುತ್ತಿದ್ದ ವೇಳೆ ಮಂಡ್ಯ ಜಿಲ್ಲೆಯ ಅರಕೆರೆ ಗ್ರಾಮದಲ್ಲಿ ಮಾತನಾಡಿದ ಅವರು, ರಮೇಶ್ ಬಂಡಿಸಿದ್ದೇಗೌಡರ ಮನೆಗೆ ಭೇಟಿ ನೀಡಿದರು. ಚುನಾವಣೆಯಲ್ಲಿ ಸೋತ ಬಳಿಕ ಬಂಡಿಸಿದ್ದೇಗೌಡ, ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿದ್ದೇನೆ ಎಂದರು.


ನನಗೆ ಸಚಿವ ಸ್ಥಾನ ಕೊಟ್ಟಿಲ್ವಾ? ಹಾಗೆಯೇ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ನಾಯಕರಿಗೂ ಅವಕಾಶ ಸಿಗುತ್ತದೆ ಅದಕ್ಕಾಗಿ ಕಾಯಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಚಲುವರಾಯಸ್ವಾಮಿ ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿಯಾಗುವ ವಿಷಯದ ಕುರಿತು ಪ್ರತಿಕ್ರಿಯಿಸಿದ್ದು, ಈ ಕುರಿತು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದಿದ್ದಾರೆ. ಎಲ್ಲ ಪಕ್ಷಗಳ ನಾಯಕರ ಜತೆಗೆ ಮಾತನಾಡಿ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರನ್ನು ನಾಮಕರಣ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದರು. ಟಿಪ್ಪು ಹೆಸರನ್ನು ಹೇಳಿದರೆ ರಾಜಕೀಯದಲ್ಲಿ ಬೆಳೆಯೋದಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದರು. ಆದರೆ ಕೆಜೆಪಿಯಲ್ಲಿದ್ದಾಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರು ಟಿಪ್ಪುನನ್ನು ಹೊಗಳಿದ್ದರು. ಟಿಪ್ಪುನನ್ನು ಹೊಗಳಿದ್ದರಿಂದಲೇ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಬಂದು ಸಂಸದ, ಪಕ್ಷದ ಅಧ್ಯಕ್ಷ, ಸಿಎಂ ಅಭ್ಯರ್ಥಿಯಾಗಿದ್ದರು. ಶೋಭಾ ಕರಂದ್ಲಾಜೆ ಸಂಸದರಾಗಿ ಆಯ್ಕೆಯಾದರು ಎಂದು ಟಾಂಗ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments