Select Your Language

Notifications

webdunia
webdunia
webdunia
webdunia

ವೈದ್ಯರ ವಿರುದ್ಧ ಎಸ್ಮಾ ಏಕೆ ಜಾರಿ ಮಾಡಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ವೈದ್ಯರ ವಿರುದ್ಧ ಎಸ್ಮಾ ಏಕೆ ಜಾರಿ ಮಾಡಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ಬೆಂಗಳೂರು , ಬುಧವಾರ, 29 ಅಕ್ಟೋಬರ್ 2014 (16:11 IST)
ವೈದ್ಯರ ಸಾಮೂಹಿಕ ರಾಜೀನಾಮೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದ್ದು, ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಸಾಯುತ್ತಿದ್ದಾರೆ. ಆದರೆ ಮುಷ್ಕರ ನಿರತ ವೈದ್ಯರ ವಿರುದ್ಧ ಎಸ್ಮಾ ಏಕೆ ಜಾರಿ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದೆ. ಪ್ರತಿ ಬಾರಿಯೂ ಸರ್ಕಾರಿ ವೈದ್ಯರು ಡ್ರಾಮಾ ಮಾಡುತ್ತಿದ್ದಾರೆ.

ಸರ್ಕಾರ ಏಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೋರ್ಟ್ ಪ್ರಶ್ನಿಸಿದೆ. ವೈದ್ಯರ ಸಾಮೂಹಿಕ ರಾಜೀನಾಮೆಯಿಂದ ಜಿಲ್ಲಾಸ್ಪತ್ರೆಗಳಲ್ಲಿ ವೈದ್ಯರಿಲ್ಲದೇ ಬಣಗುಡುತ್ತಿದ್ದು, ನಿನ್ನೆ ನವಸಂಜಾತ ಮಗು ಮತ್ತು ಹೃದಯಾಘಾತದಿಂದ ವ್ಯಕ್ತಿಯೊಬ್ಬ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮುಷ್ಕರ ನಿರತ ವೈದ್ಯರ ವಿರುದ್ಧ ಅಗತ್ಯ ಸೇವಾ ಕಾಯ್ದೆ ಎಸ್ಮಾವನ್ನು ಏಕೆ ಜಾರಿ ಮಾಡಿಲ್ಲ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಹೈಕೋರ್ಟ್‌ನ ಹಿಂದಿನ ಆದೇಶ ಪಾಲಿಸದಿರಲು ಕಾರಣವೇನು? ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಯಾಕೆ ಹೂಡಬಾರದು ಎಂದು ಹೈಕೋರ್ಟ್ ಪೀಠ ಪ್ರಶ್ನಿಸಿದೆ.  ವೈದ್ಯಾಧಿಕಾರಿಗಳ ಸಂಘದ ಖುದ್ದು ಹಾಜರಿಗೆ ಕೋರ್ಟ್ ಆದೇಶ ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. 
 

Share this Story:

Follow Webdunia kannada