Webdunia - Bharat's app for daily news and videos

Install App

ಬ್ರಹ್ಮರಥಕ್ಕಾಗಿ ಪ್ರತಿಭಟನೆ ಏಕೆ ಗೊತ್ತಾ?

Webdunia
ಶನಿವಾರ, 6 ಅಕ್ಟೋಬರ್ 2018 (17:32 IST)
ಇತಿಹಾಸ ಪ್ರಸಿದ್ದ ಚಾಮರಾಜೇಶ್ವರ ಬ್ರಹ್ಮರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರ ಪರಿಣಾಮ, ಎರಡು ವರ್ಷಗಳಿಂದ ಆಷಾಡ ಮಾಸದ ರಥೋತ್ಸವಕ್ಕೆ ಬ್ರೇಕ್ ಬಿದ್ದಿದೆ. ಬ್ರಹ್ಮ ರಥವನ್ನ ಪುನರ್ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ.

ಚಾಮರಾಜನಗರ ಪಟ್ಟಣದ ವಿವಿಧ ಸಮುದಾಯದ ಪ್ರಮುಖರು, ಸಂಘ ಸಂಸ್ಥೆಗಳ ಮುಖ್ಯಸ್ಥರು ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಪ್ರತಿಭಟನಾ ಧರಣಿ ನಡೆಸಿದ್ದಾರೆ.  

ಬ್ರಹ್ಮರಥದ ನಿರ್ಮಾಣಕ್ಕಾಗಿ ಸರ್ಕಾರ ಒಂದು ಕೋಟಿ ಇಪ್ಪತ್ತು ಲಕ್ಷ ರೂಪಾಯಿ ಅನುದಾನ ನೀಡಿದ್ದರೂ, ರಥ ನಿರ್ಮಾಣದ ಕಾಮಗಾರಿ ಇನ್ನೂ ಆರಂಭಿಸದ ಜಿಲ್ಲಾಡಳಿತ ಕ್ರಮವನ್ನ ಪ್ರತಿಭಟನಾಕಾರರು ಖಂಡಿಸಿದರು.

ಶಿಥಿಲಗೊಂಡಿರುವ ಚಾಮರಾಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಆರಂಭಗೊಂಡು, ಎರಡು ವರ್ಷಗಳೇ ಕಳೆದಿವೆ. ಇನ್ನು ಕಾಮಗಾರಿ ಪೂರ್ಣಗೊಂಡಿಲ್ಲವೆಂದು ಆರೋಪಿಸಿದ ಧರಣಿ ನಿರತರು, ಜಿಲ್ಲಾಡಳಿತ, ಮುಜರಾಯಿ ಇಲಾಖೆ ಮತ್ತು ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ಬ್ರಹ್ಮ ರಥವನ್ನ ನಿರ್ಮಾಣ ಮಾಡಬೇಕು. ನೆನೆಗುದಿಗೆ ಬಿದ್ದಿರುವ ಜೀರ್ಣೋದ್ಧಾರ ಕಾಮಗಾರಿಯನ್ನ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments