Webdunia - Bharat's app for daily news and videos

Install App

ಡಾ.ಸುಧಾಕರ್ ಕುಂಬಳಕಾಯಿ ಕಳ್ಳನಂತೆ ವರ್ತಿಸುವುದ್ಯಾಕೆ: ದಿನೇಶ್ ಗುಂಡೂರಾವ್ ವ್ಯಂಗ್ಯ

Sampriya
ಮಂಗಳವಾರ, 3 ಸೆಪ್ಟಂಬರ್ 2024 (17:15 IST)
Photo Courtesy X
ಬೆಂಗಳೂರು: ಕೋವಿಡ್‌ ಹಗರಣದ ತನಿಖಾ ವರದಿ ಮುಖ್ಯಮಂತ್ರಿಗಳ ಕೈಸೇರಿದೆ ಅಷ್ಟೆ. ಇನ್ನೂ ಬಹಿರಂಗಗೊಂಡಿಲ್ಲ. ಆದರೆ ಮಾಜಿ ಸಚಿವ ಡಾ.ಸುಧಾಕರ್ ಕುಂಬಳಕಾಯಿ ಕಳ್ಳನಂತೆ ವರ್ತಿಸಲು ಆರಂಭಿಸಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್  ವ್ಯಂಗ್ಯ ಮಾಡಿದ್ದಾರೆ..

ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ವಿರೋಧ ಪಕ್ಷದಲ್ಲಿ ಇದ್ದಾಗಲೂ ಕೋವಿಡ್‌ ಹಗರಣದ ಬಗ್ಗೆ ತನಿಖೆಯಾಗಬೇಕು ಎಂದು ನಮ್ಮ ಪಕ್ಷ ಒತ್ತಡ ಹಾಕಿತ್ತು. ಈಗ ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಪದೇ ಪದೇ ನ್ಯಾಯಾಧೀಶರ ಮೇಲೆ ಒತ್ತಡ ಹಾಕಿದ್ದಾರೆ ಎನ್ನುವ ಅವರು ವರದಿ ಬಹಿರಂಗವಾಗುವವರೆಗೂ ಕಾಯುತ್ತಿಲ್ಲ. ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸುತ್ತಾ ಓಡಾಡುತ್ತಿದ್ದಾರೆ. ತಪ್ಪು ಮಾಡಿಲ್ಲ ಎಂದು ನಂಬಿಕೆಯಿದ್ದರೆ ಆಡಳಿತ ಪಕ್ಷದ ಮೇಲೆ ಕಿಡಿಕಾರುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.


ಹಿಂದಿನ ಸರ್ಕಾರದಲ್ಲಿ ಪರ್ಸಂಟೇಜ್‌ ಭ್ರಷ್ಟಾಚಾರ ಇತ್ತು ಎಂದು ಮಾಧ್ಯಮಗಳ ಮುಂದೆಯೇ ಒಪ್ಪಿಕೊಂಡಿರುವ ಸುಧಾಕರ್‌ ಅವರಿಗೆ ಈ ಕೋವಿಡ್‌ ತನಿಖಾ ವರದಿ ತಮ್ಮ ಕೊರಳಿಗೆ ಉರುಳಾಗುವ ಬಗ್ಗೆ ಮುನ್ಸೂಚನೆ ಸಿಕ್ಕಿದೆಯೇ ಅನ್ನಿಸುತ್ತದೆ ಎಂದಿದ್ದಾರೆ. ‌

ಇನ್ನೇನು ಸಂಪುಟ ಸಭೆಯಲ್ಲಿ ಕೋವಿಡ್‌ ತನಿಖಾ ವರದಿ ಬಹಿರಂಗವಾಗಲಿದೆ. ವರದಿಯಲ್ಲಿ ಏನಿದೆ ಎಂಬುದರ ಮೇಲೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. ಆದರೂ, ಸಂಸದ ಸುಧಾಕರ್‌ ಅವರು ತಮ್ಮ ಹೆಗಲನ್ನು ಮುಟ್ಟಿ ನೋಡಿಕೊಳ್ಳುತ್ತಾ ತಮ್ಮ ತಪ್ಪು ಇದೆ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದ್ದಾರೆಯೇ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments