Select Your Language

Notifications

webdunia
webdunia
webdunia
webdunia

ನನಗೆ ಜೀರೊ ಟ್ರಾಫಿಕ್‌ ಯಾಕೆ ಕೊಟ್ರಿ : ಪೊಲೀಸ್ ಆಯುಕ್ತರಿಗೆ ಖಡಕ್ ವಾರ್ನಿಂಗ್

ನನಗೆ ಜೀರೊ ಟ್ರಾಫಿಕ್‌ ಯಾಕೆ ಕೊಟ್ರಿ : ಪೊಲೀಸ್ ಆಯುಕ್ತರಿಗೆ ಖಡಕ್ ವಾರ್ನಿಂಗ್
ಮೈಸೂರು , ಭಾನುವಾರ, 11 ಜೂನ್ 2023 (11:50 IST)
ಮೈಸೂರು : ತನಗೆ ಬೇಡ ಎಂದಿದ್ದರೂ ಜೀರೊ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಮೈಸೂರು ಪೊಲೀಸ್ ಆಯುಕ್ತರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು. ನನಗೆ ಜೀರೊ ಟ್ರಾಫಿಕ್ ಯಾಕೆ ಮಾಡಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
 
ಮೈಸೂರು ವಿಮಾನ ನಿಲ್ದಾಣದಿಂದ ಜಿಲ್ಲಾ ಪಂಚಾಯಿತಿಗೆ ಸಿದ್ದರಾಮಯ್ಯ ಆಗಮಿಸಿದ್ದರು. ಈ ವೇಳೆ ಜೀರೊ ಟ್ರಾಫಿಕ್ಸ್ ಸೌಲಭ್ಯ ಕಲ್ಪಿಸಿದ್ದಕ್ಕಾಗಿ ಪೊಲೀಸ್ ಆಯುಕ್ತರ ಮೇಲೆ ಗರಂ ಆದರು. “ಜೀರೊ ಟ್ರಾಫಿಕ್ ಏಕೆ ಮಾಡಿದ್ದೀರಾ? ನನಗೆ ಜೀರೊ ಟ್ರಾಫಿಕ್ ಸೌಲಭ್ಯ ಬೇಡ ಅಂತ ಹೇಳಿರೋದು ನಮಗೆ ಗೊತ್ತಿದೆಯಾ ಎಂದು ಸಿಎಂ ಪ್ರಶ್ನಿಸಿದ್ದಾರೆ. 

ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದಾಗ ಏನನ್ನೂ ಮಾತನಾಡದೇ ಪೊಲೀಸ್ ಆಯುಕ್ತರು ನಿಂತಿದ್ದರು. ಆಗ “DONT DO THAT” ಎಂದು ಸಿದ್ದರಾಮಯ್ಯ ಅವರು ಪೊಲೀಸ್ ಆಯುಕ್ತರಿಗೆ ಖಡಕ್ ವಾರ್ನಿಂಗ್ ಮಾಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆ