Webdunia - Bharat's app for daily news and videos

Install App

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

Krishnaveni K
ಗುರುವಾರ, 15 ಮೇ 2025 (12:21 IST)
ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ವೇಳೆ ಯುದ್ಧದ ಕ್ರೆಡಿಟ್ ಎಲ್ಲಾ ಸೈನಿಕರಿಗೆ ಸಲ್ಲಬೇಕು. ಕೇವಲ ಮೋದಿಗೆ ಮಾತ್ರ ಯಾಕೆ ಕ್ರೆಡಿಟ್ ನೀಡಲಾಗುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ನಡೆಸಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿತ್ತು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಸನ್ನಿವೇಶ ಉಂಟಾಗಿತ್ತು.

ಇದಾದ ಬಳಿಕ ಮೋದಿಯ ನಾಯಕತ್ವದ ಬಗ್ಗೆ ಭಾರೀ ಹೊಗಳಿಕೆ ವ್ಯಕ್ತವಾಗಿತ್ತು. ಇದೇ ಕಾರಣಕ್ಕೆ ಸಂತೋಷ್ ಲಾಡ್ ಈಗ ಮಾಧ್ಯಮದ ಮುಂದೆ ಕಿಡಿ ಕಾರಿದ್ದಾರೆ. ‘ಆಪರೇಷನ್ ಸಿಂಧೂರ್ ಮತ್ತು ಭಾರತ-ಪಾಕಿಸ್ತಾನದ ಸಂಘರ್ಷದಲ್ಲಿ ಯಶಸ್ಸಿನ ಸಂಪೂರ್ಣ ಕ್ರೆಡಿಟ್ ಭಾರತೀಯ ಸೇನೆಗೆ ಸಲ್ಲಬೇಕು. ಇದಕ್ಕೆ ಮೋದಿ ಒಬ್ಬರೇ ಮಾಡಿದ್ದು ಎಂಬಂತೆ ಕ್ರೆಡಿಟ್ ಯಾಕೆ ಕೊಡಲಾಗುತ್ತಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

ನಮ್ಮ ದೇಶಕ್ಕೆ ಪಾಕಿಸ್ತಾನವನ್ನು ಹೊಡೆದು ಹಾಕಲು ಒಳ್ಳೆಯ ಅವಕಾಶವಿತ್ತು. ದೇಶದ ಜನ, ಪಕ್ಷಗಳೂ ಬೆಂಬಲಿಸಿದ್ದವು. ಆದರೆ ಟ್ರಂಪ್ ಸಾಹೇಬರು ಹೇಳಿದ್ರು ಅಂತ ಕದನ ವಿರಾಮಕ್ಕೆ ಒಪ್ಪಿಕೊಂಡು ಮೋದಿ ಎಲ್ಲಾ ಅವಕಾಶವನ್ನು ಹಾಳು ಮಾಡಿದ್ರು ಎಂದು ಸಂತೋಷ್ ಲಾಡ್ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments