ಡಿಕೆ ಶಿವಕುಮಾರ್ ಗೆ ಅದ್ಧೂರಿ ಸ್ವಾಗತ ಏಕೆ?

Webdunia
ಶನಿವಾರ, 26 ಅಕ್ಟೋಬರ್ 2019 (18:10 IST)
ಮಾಜಿ ಸಚಿವ ಡಿ ಕೆ ಶಿವಕುಮಾರ ಅವರಿಗೆ ಅದ್ಧೂರಿ ಸ್ವಾಗತ ನೀಡಿರುವುದು ಸರಿ ಅಲ್ಲ. ಹೀಗಂತ ಆರೋಪಗಳು ಕೇಳಿಬಂದಿವೆ.

ಡಿಕೆ ಶಿವಕುಮಾರ್ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಇರುವಾಗ ಈ ರೀತಿಯ ವರ್ತನೆ ಸರಿ ಅಲ್ಲ. ಹೀಗಂತ ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.

ಅನರ್ಹಗೊಂಡ ಶಾಸಕರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಆದ್ರೆ, ಯಾರ ಕಾರಣದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂಬುದು ಪಕ್ಷದ ಕಾರ್ಯಕರ್ತರಿಗೆ ಗೊತ್ತಿದೆ.
ಅನರ್ಹಗೊಂಡ ಶಾಸಕರ ಬಗ್ಗೆ ಸುಪ್ರಿಂ ಕೋರ್ಟ್ ಇನ್ನೂ ಅಂತಿಮ ತೀರ್ಪು ನೀಡುವುದು ಬಾಕಿ
ಇದೆ. ತೀರ್ಪು ಪ್ರಕಟಗೊಂಡ ನಂತರ ಬಿಜೆಪಿ ಟಿಕೆಟ್ ಅಂತಿಮಗೊಳಿಸಲಾಗುವುದು. ಅನರ್ಹರು ಇನ್ನೂ ಬಿಜೆಪಿ ಸೇರಿಲ್ಲ ಎಂದರು. 

ನೆರೆ ಸಂತ್ರಸ್ತರಿಗೆ ಈಗಾಗಲೇ ಪರಿಹಾರ ನೀಡಲಾಗುತ್ತಿದೆ. ಮನೆ ಬಿದ್ದವರಿಗೆ 5 ಲಕ್ಷ ರೂ. ಹಾಗೂ 30/40 ನಿವೇಶನ ಉಚಿತವಾಗಿ ನೀಡಲಾಗುತ್ತದೆ. ಪರಿಹಾರ ನೀಡಲು ಯಾವುದೇ ಆರ್ಥಿಕ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments