ಅಣುಅಣುವಿನಲ್ಲೂ ದೇವರಿರುವನು ಪಾರ್ವತಿ ದೇವಿಯ ಬಚ್ಚಲು ಮನೆಯಲ್ಲಿ ಯಾಕೆ ಇರ್ಲಿಲ್ಲ: ಬಿಟಿ ಲಲಿತಾ

Sampriya
ಶುಕ್ರವಾರ, 22 ನವೆಂಬರ್ 2024 (19:12 IST)
Photo Courtesy X
ಧಾರವಾಡ: ಮಾಜಿ ಸಚಿವೆ, ನಟಿ, ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಬಿಟಿ ಲಲಿತಾ ನಾಯಕ್‌ ಮತ್ತೊಮ್ಮೆ ಹಿಂದೂ ದೇವರುಗಳ ಅವಹೇಳನ ಮಾಡುವ ಮೂಲಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಮಾರಂಭದಲ್ಲಿ ಹಿಂದೂ ದೇವರುಗಳಾದ ಗಣೇಶ, ಶಿವ, ಪಾರ್ವತಿ, ಅಯ್ಯಪ್ಪನ ಬಗ್ಗೆ ಲೇವಡಿ ಮಾಡಿ ಮಾತನಾಡಿದ್ದಾರೆ. ಅದ್ಯ ಇವರ ಭಾಷಣದ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಗಣೇಶ ಅನ್ನೋದು ಒಂದು ಜ್ಞಾನ. ಆ ಜ್ಞಾನಕ್ಕೆ ಒಂದು ಆಕಾರ ಕೊಟ್ಟಿದ್ದಾರೆ. ಅದಕ್ಕೆ ಒಂದು ಸೊಂಡಿಲು, ತಲೆ ಇದೆ. ಈಶ್ವರ ಅನ್ನುವಂತಹ ಅಪ್ಪ ಇದಾನೆ. ದೇವರು ಇದ್ದವನು ಯಾರನ್ನಾದರೂ ಕೊಲ್ಲುತ್ತಾನಾ? ಧರೆಯಿಂದ ಆಕಾಶದೆತ್ತರಕ್ಕೆ ಬೆಳೆದವನು ದೇವರು. ಅಣುರೇಣು ತೃಣಕಾಷ್ಟದಲ್ಲಿಯೂ ದೇವರಿದ್ದಾನೆ ಎನ್ನುತ್ತೀರಿ. ಹಾಗಿದ್ದರೆ, ಪಾರ್ವತಿ ದೇವಿಯ ಬಚ್ಚಲು ಮನೆಯಲ್ಲಿ ದೇವರು ಇರ್ಲಿಲ್ವಾ ಎಂದು ಲೇವಡಿ ಮಾಡಿದ್ದಾನೆ.

ಹುಡುಗ ಅಡ್ಡ ನಿಂತಿದ್ದಾನೆ ಎಂದು ಕೊಂದು ಹೋಗುವವನ್ನು ದೇವರು ಅನ್ನೋದು ಹೇಗೆ? ಅವರೆಲ್ಲ ದೇವರಲ್ಲ, ಮನುಷ್ಯರು. ಆ ಮನುಷ್ಯ ಮಾಡಿರೋ ತಪ್ಪು ನಾವು ಮಾಡಬಾರದು. ಅಯ್ಯಪ್ಪ ಭಕ್ತರು ಅಂತಾ ಕೆಲವರು ಬಹಳ ಮಾಡುತ್ತಿರುತ್ತಾರೆ. ಆದರೆ, ಅಯ್ಯಪ್ಪ ಕಾಡಿನಲ್ಲಿ ಇಲ್ಲ. ಅಯ್ಯಪ್ಪ ಎಲ್ಲ ಕಡೆ ಅನಾಥವಾಗಿ ಇದ್ದಾನೆ. ಅನೇಕ ಅನಾಥ ಮಕ್ಕಳಿದ್ದಾರೆ. ಅವರಿಗೆ ತಂದೆ-ತಾಯಿ ಇಲ್ಲ. ಅವರನ್ನು ನೋಡಿಕೊಳ್ಳುವ ಕೆಲಸ ಆಗಬೇಕು. ಅದನ್ನು ಬಿಟ್ಟು ಕಾಡಿಗೆ ಹೋಗುವುದಲ್ಲ ಎಂದು ಅಯ್ಯಪ್ಪ ಮಾಲಾಧಾರಿಗಳ ಬಗ್ಗೆ ಅವಹೇಳನ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments