Webdunia - Bharat's app for daily news and videos

Install App

ಶಿವರಾಜ್ ಕುಮಾರ್ ತಮ್ಮ ಪತ್ನಿಯನ್ನು ಉಪ ಚುನಾವಣೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವುದ್ಯಾಕೆ?

Webdunia
ಭಾನುವಾರ, 14 ಅಕ್ಟೋಬರ್ 2018 (07:37 IST)
ಬೆಂಗಳೂರು : ಶಿವಮೋಗ್ಗ ಲೋಕಸಭಾ ಉಪಚುನಾವಣೆಗೆ ತಮ್ಮ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕೀಳಿಸಲು ನಟ ಶಿವರಾಜ್ ಕುಮಾರ್ ಹಿಂದೇಟು ಹಾಕುತ್ತಿದ್ದಾರಂತೆ.


ಹೌದು ಬಿ.ಎಸ್.ಯಡಿಯೂರಪ್ಪರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿರುವ ವಿಚಾರ ಈಗಾಗಲೇ ತಿಳಿದಿದೆ. ಹಾಗೇ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಶಿವಮೊಗ್ಗ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಆದಕಾರಣ ಜೆಡಿಎಸ್ ನಿಂದ ಗೀತಾ ಅವರನ್ನು  ಕಣಕ್ಕಿಳಿಸಲು ಮಾಜಿ ಪ್ರಧಾನಿ ದೇವೇಗೌಡರು ಪ್ಲಾನ್ ಮಾಡಿದ್ದರು.


ಆದರೆ ಕಳೆದ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೀತಾ ಶಿವರಾಜ್‍ಕುಮಾರ್ ಸ್ಪರ್ಧಿಸಿ ಯಡಿಯೂರಪ್ಪರ ವಿರುದ್ಧ ಸೋಲು ಕಂಡಿದ್ದರು. ಆದಕಾರಣ ಪತ್ನಿ ಗೀತಾ ಅವರನ್ನ ಉಪ ಚುನಾವಣೆಗೆ ನಿಲ್ಲಿಸಲು ಶಿವರಾಜ್‍ಕುಮಾರ್ ಹಿಂದೇಟು ಹಾಕುತ್ತಿದ್ದಾರಂತೆ. ಸಿಎಂ ಕುಮಾರಸ್ವಾಮಿ ಅವರ ಬಳಿ ಯಾವುದೇ ಕಾರಣಕ್ಕೂ ಬೈ ಎಲೆಕ್ಷನ್ ಬೇಡ. ಈ ಮೊದಲೇ ನಾವು ಅನುಭವಿಸಿದ್ದು ಸಾಕು, ನಮಗೆ ಎಲೆಕ್ಷನ್ ಸಹವಾಸ ಬೇಡ. ಮಧು ಬಂಗಾರಪ್ಪ ಸ್ಪರ್ಧೆ ಮಾಡೋದಾದರೆ ನಾವು ಬಂದು ಪ್ರಚಾರ ಮಾಡುತ್ತೇವೆ. ಆದರೆ ಮಧು ಬಂಗಾರಪ್ಪ ಮನವೊಲಿಸೋದು ನಿಮಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ