ರಾಮಮಂದಿರ ಏಕೆ ಬೇಡ? ಕೃತಿ ಮೂಲಕ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ

Webdunia
ಗುರುವಾರ, 28 ಅಕ್ಟೋಬರ್ 2021 (22:21 IST)
ಬೆಂಗಳೂರು: ರಾಮಮಂದಿರ ಏಕೆ ಬೇಡ? ಕೃತಿ ಮೂಲಕ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಹಾಗೂ ಸಮದಾಯಗಳ ನಡುವೆ ದ್ವೇಷ ಬಿತ್ತಿದ ಆರೋಪದಡಿ ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರೊಫೆಸರ್ ಕೆ.ಎಸ್ ಭಗವಾನ್ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ಸರ್ಕಾರ 8 ವಾರದಲ್ಲಿ ಪರಿಗಣಿಸಿ ಇತ್ಯರ್ಥಪಡಿಸಬೇಕು. ಒಂದು ವೇಳೆ ನಿಗದಿತ ಅವಧಿಯಲ್ಲಿ ಅರ್ಜಿ ಇತ್ಯರ್ಥಪಡಿಸದಿದ್ದರೆ ಸರ್ಕಾರದ ಮುಖ್ಯ ಕಾರ್ಯದರ್ಶಿ ದಿನಕ್ಕೆ 2 ಸಾವಿರ ರೂಪಾಯಿಯಂತೆ ದಂಡ ಪಾವತಿಸಬೇಕು ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.
ಪ್ರಕರಣವೇನು?: ಪ್ರೊ. ಕೆ.ಎಸ್. ಭಗವಾನ್ 2018ರಲ್ಲಿ 'ರಾಮಮಂದಿರ ಏಕೆ ಬೇಡ?' ಕೃತಿ ರಚಿಸಿದ್ದರು. ಇದನ್ನು ಸರ್ಕಾರ ತನ್ನ ಗ್ರಂಥಾಲಯಗಳಿಗೂ ಸರಬರಾಜು ಮಾಡಿತ್ತು. ಆದರೆ, ಕೃತಿಯಲ್ಲಿ ರಾಮ ಹಾಗೂ ಹಿಂದುತ್ವದ ಕಲ್ಪನೆಗಳಿಗೆ, ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗಿದೆ. ಅಲ್ಲದೇ, ಸಮುದಾಯಗಳ ನಡುವೆ ದ್ವೇಷ ಬಿತ್ತಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇಕ್ಕೇರಿ ನಿವಾಸಿ ಮಹಾಬಲೇಶ್ವರ ಎಂಬುವರು ಸಾಗರ ಜೆಎಂಎಫ್ ಸಿ ಕೋರ್ಟ್​​ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಅಲ್ಲದೇ, ಪ್ರೊಫೆಸರ್ ಐಪಿಸಿ ಸೆಕ್ಷನ್ 153 ಎ (ಧಾರ್ಮಿಕ ಸೌಹಾರ್ದತೆ ಕದಡಿ ದ್ವೇಷ ಬಿತ್ತಿದ) ಐಪಿಸಿ ಸೆಕ್ಷನ್ 295 ಎ (ಪೂಜಾ ಸ್ಥಳ ಅವಮಾನಿಸಿ ಧಾರ್ಮಿಕ ನಂಬಿಕೆಗೆ ಧಕ್ಕೆ) ಹಾಗೂ ಐಪಿಸಿ ಸೆಕ್ಷನ್ 500 (ಮಾನಹಾನಿ) ಅಡಿ ವಿಚಾರಣೆ ನಡೆಸಲು ಪೂರ್ವಾನುಮತಿ ಕೋರಿ 2019ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಸರ್ಕಾರ ಅರ್ಜಿ ಪರಿಗಣಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ದೂರುದಾರರು ತಮ್ಮ ಅರ್ಜಿಯನ್ನು ಸರ್ಕಾರ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ನಿರ್ದೇಶಿಸಲು ಕೋರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments