Select Your Language

Notifications

webdunia
webdunia
webdunia
webdunia

ಏನಾಗಿದೆ ನಿಮಗೆ ಕಲಾಪಕ್ಕೆ ಯಾಕೆ ಗೈರು: ಶಾಸಕ, ಸಚಿವರಿಗೆ ಸಿಎಂ ಕ್ಲಾಸ್

ಏನಾಗಿದೆ ನಿಮಗೆ ಕಲಾಪಕ್ಕೆ ಯಾಕೆ ಗೈರು: ಶಾಸಕ, ಸಚಿವರಿಗೆ ಸಿಎಂ ಕ್ಲಾಸ್
ಬೆಂಗಳೂರು , ಬುಧವಾರ, 15 ನವೆಂಬರ್ 2017 (14:18 IST)
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ನಮ್ಮ ಸರಕಾರದ ಕೊನೆಯ ಅಧಿವೇಶನವಾಗಿದೆ. ಆದಾಗ್ಯೂ ಸಚಿವ ಶಾಸಕರು ಕಲಾಪಕ್ಕೆ ಗೈರು ಹಾಜರಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಕಲಾಪಕ್ಕೆ ಗೈರುಹಾಜರಾಗಲು ಏನು ಕಾರಣ? ನಿಮಗೆ ಆಗುತ್ತಿರುವ ತೊಂದರೆಯಾದರೂ ಏನು? ತೊಂದರೆಯನ್ನಾದರೂ ಹೇಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಜನಪ್ರತಿನಿಧಿಗಳಾಗಿ ಅಧಿವೇಶನ ನಡೆಯುತ್ತಿರುವ ಕಲಾಪಗಳಿಗೆ ಗೈರುಹಾಜರಾಗುವುದು ಸರಿಯಲ್ಲ. ವಿಪ್ ಜಾರಿಗೊಳಿಸಿದರೂ ಕೂಡಾ ಸದನಕ್ಕೆ ಹಾಜರಾಗದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
 
ನಾಳೆಯಿಂದ ಕೂಡಲೇ ಎಲ್ಲಾ ಶಾಸಕರು, ಸಚಿವರು ಕಲಾಪಕ್ಕೆ ಹಾಜರಾಗಿ, ಸಚಿವ ಜಾರ್ಜ್ ಮತ್ತು ಮೂಢನಂಬಿಕೆ ವಿಧೇಯಕವನ್ನು ಬೆಂಬಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕಟ್ಟಾಜ್ಞೆ ಹೊರಡಿಸಿದ್ದಾರೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ- ಜಗದೀಶ್ ಶೆಟ್ಟರ್ ನಡುವೆ ಟಾಕ್ ಫೈಟ್