Select Your Language

Notifications

webdunia
webdunia
webdunia
webdunia

ಗಣಪತಿ ಆತ್ಮಹತ್ಯೆ ಸಿಬಿಐಗೆ ಯಾಕಿಲ್ಲ?

ಗಣಪತಿ ಆತ್ಮಹತ್ಯೆ ಸಿಬಿಐಗೆ ಯಾಕಿಲ್ಲ?
ನವದೆಹಲಿ , ಮಂಗಳವಾರ, 21 ಫೆಬ್ರವರಿ 2017 (07:10 IST)
ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಏಕೆ ಒಪ್ಪಿಸಬಾರದು ಎನ್ನುವ ಕುರಿತು ಎರಡುವಾರಗಳಲ್ಲಿ ವಿವರಣೆ ನೀಡಿ ಎಂದು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಮೃತ ಗಣಪತಿ ತಂದೆ ಎಂ.ಕೆ ಕುಶಾಲಪ್ಪ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸುತ್ತಿರುವ ಎ.ಕೆ. ಗೋಯಲ್ ಮತ್ತು ಯು.ಯು.ಲಲಿತ್ ಅವರನ್ನೊಳಗೊಂಡ ಪೀಠ ಈ ಸೂಚನೆಯನ್ನು ನೀಡಿದೆ. ಆದರೆ ರಾಜ್ಯದ ಪರ ವಕೀಲರು ಪ್ರತಿಕ್ರಿಯಿಸಲು ನಾಲ್ಕು ವಾರಗಳ ಕಾಲಾವಧಿ ನೀಡಿ ಎಂದು ಮನವಿ ಮಾಡಿದರು. ಆದರೆ ನ್ಯಾಯಾಧೀಶರ ಪೀಠ ಅದಕ್ಕೆ ಅನುಮತಿಯನ್ನು ನೀಡಲಿಲ್ಲ.
 
ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 19ರಂದು ನಿರಾಕರಿಸಿತ್ತು. ಈ ಆದೇಶ ಪ್ರಶ್ನಿಸಿ ಕುಶಾಲಪ್ಪ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಚಾಮುಂಡಿ ಬೆಟ್ಟದಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ