Webdunia - Bharat's app for daily news and videos

Install App

ಗೆದ್ದ ಬೆನ್ನಲ್ಲೇ ಒಮರ್ ಅಬ್ದುಲ್ಲಾ ದಿಡೀರ್ ಮೋದಿ ಹೊಗಳುತ್ತಿರುವುದಕ್ಕೆ ಕಾರಣವೇನು

Krishnaveni K
ಬುಧವಾರ, 9 ಅಕ್ಟೋಬರ್ 2024 (16:15 IST)
Photo Credit: X
ಜಮ್ಮು ಕಾಶ್ಮೀರ: ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲುವು ಸಾಧಿಸುತ್ತಿದ್ಧಂತೇ ಒಮರ್ ಅಬ್ದುಲ್ಲಾ ಮೋದಿ ಸರ್ಕಾರವನ್ನು ಹೊಗಳಲು ಶುರು ಮಾಡಿರುವುದು ಅನೇಕರ ಅಚ್ಚರಿಗೆ ಕಾರಣವಾಗಿದೆ.

ಒಮರ್ ಪಕ್ಷ ಇಂಡಿಯಾ ಒಕ್ಕೂಟದಲ್ಲಿದೆ. ಹಾಗಿದ್ದರೂ ಒಮರ್ ಅಬ್ದುಲ್ಲಾ ಕೇಂದ್ರ ಸರ್ಕಾರಕ್ಕೆ ಜೈ ಎನ್ನುತ್ತಿರುವುದು ಅನೇಕರ ಅಚ್ಚರಿಗೆ ಕಾರಣವಾಗುತ್ತಿದೆ. ಒಂದೆಡೆ ಕಾಂಗ್ರೆಸ್ ಈಗಲೂ ನ್ಯಾಷನಲ್ ಕಾನ್ಫರೆನ್ಸ್ ನಮ್ಮ ಜೊತೆಗೇ ಇದೆ ಎನ್ನುತ್ತಿದೆ. ಆದರೆ ಒಮರ್ ಅಬ್ದುಲ್ಲಾ ಈಗಿನ ವರಸೆ ನೋಡಿದರೆ ಅವರು ಬಿಜೆಪಿ ಜೊತೆ ಹೋಗುವ ಲಕ್ಷಣವಿದೆ.

ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ಸ್ಥಾನ ಮಾನ ರದ್ದಾದ ಬಳಿಕ ಅದೂ ಕೂಡಾ ಇತರೇ ರಾಜ್ಯಗಳಂತೇ ಆಗಿದೆ. ಹೀಗಾಗಿ ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಇರಲೇ ಬೇಕು. ಸದ್ಯಕ್ಕೆ ರಾಜ್ಯಕ್ಕೆ ವಿಶೇಷ ಅನುದಾನ ಕೊಡಿಸುವ ನಿಟ್ಟಿನಲ್ಲಿ ಅವರು ಕೇಂದ್ರದ ಜೊತೆಗಿರುವ ಮಾತನಾಡುತ್ತಿರಬಹುದು ಎಂದು ಕೆಲವರು ವಿಶ್ಲೇಷಿಸುತ್ತಿದ್ದಾರೆ.

ಆದರೆ ಇದರ ಹಿಂದೆ ಕೇವಲ ಇದೊಂದೇ ಕಾರಣವಿರಲಾರದು. ಕಾಂಗ್ರೆಸ್ ಗೆ ಪರೋಕ್ಷ ಎಚ್ಚರಿಕೆ ಕೊಡುವ ಅಥವಾ ಮುಂದೆ ಬಿಜೆಪಿ ಜೊತೆಗೂಡಿಯೇ ಸರ್ಕಾರ ರಚಿಸುವ ಇರಾದೆ ಒಮರ್ ಅಬ್ದುಲ್ಲಾಗಿರಬಹುದು ಎಂದು ಇನ್ನು ಕೆಲವರು ವಿಶ್ಲೇಷಿಸಿದ್ದಾರೆ. ಇದೇ ಕಾರಣಕ್ಕೆ ಕಣಿವೆ ರಾಜ್ಯದಲ್ಲಿ ಚುನಾವಣೆ ಗೆಲುವಿನ ಬಳಿಕ ಒಮರ್ ವರಸೆಯೇ ಬದಲಾಗಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments