Select Your Language

Notifications

webdunia
webdunia
webdunia
webdunia

ಬ್ರಿಗೇಡ್‌ಗೆ ವಿರೋಧ ಏಕೆ ಎಂದು ಬಿಎಸ್‌ವೈರನ್ನೇ ಕೇಳಿ: ಕೆ.ಎಸ್.ಈಶ್ವರಪ್ಪ

ಬ್ರಿಗೇಡ್‌ಗೆ ವಿರೋಧ ಏಕೆ ಎಂದು ಬಿಎಸ್‌ವೈರನ್ನೇ ಕೇಳಿ: ಕೆ.ಎಸ್.ಈಶ್ವರಪ್ಪ
ವಿಜಯಪುರ , ಸೋಮವಾರ, 19 ಡಿಸೆಂಬರ್ 2016 (10:53 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ವಿರೋಧಿಸುತ್ತಿದ್ದಾರೆ. ಏಕೆ ಬ್ರಿಗೇಡ್‌ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಬಿಎಸ್‌ವೈರನ್ನೆ ಕೇಳಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ನಾಯಕರು ಸೇರಿದಂತೆ ಯಾವ ಬಿಜೆಪಿ ನಾಯಕರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಬಿ.ಎಸ್.ಯಡಿಯೂರಪ್ಪ ಏಕೆ ವಿರೋಧಿಸುತ್ತಿದ್ದಾರೆ ಅವರನ್ನೇ ಕೇಳಬೇಕು ಎಂದಿದ್ದಾರೆ.
 
ಬ್ರಿಗೇಡ್‌ಗೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ಜೊತೆ ಮಾತನಾಡುತ್ತಲೇ ಇದ್ದೇನೆ. ಮುಂದಿಯೂ ಸಹ ಬ್ರಿಗೇಡ್‌ನಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬರಲಿದೆ ಡ್ಯುಯಲ್ ಸಿಮ್ ಆಪಲ್ ಐಫೋನ್?