Webdunia - Bharat's app for daily news and videos

Install App

ಬ್ರಿಗೇಡ್‌ಗೆ ವಿರೋಧ ಏಕೆ ಎಂದು ಬಿಎಸ್‌ವೈರನ್ನೇ ಕೇಳಿ: ಕೆ.ಎಸ್.ಈಶ್ವರಪ್ಪ

Webdunia
ಸೋಮವಾರ, 19 ಡಿಸೆಂಬರ್ 2016 (10:53 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ವಿರೋಧಿಸುತ್ತಿದ್ದಾರೆ. ಏಕೆ ಬ್ರಿಗೇಡ್‌ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂದು ಬಿಎಸ್‌ವೈರನ್ನೆ ಕೇಳಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ನಾಯಕರು ಸೇರಿದಂತೆ ಯಾವ ಬಿಜೆಪಿ ನಾಯಕರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಬಿ.ಎಸ್.ಯಡಿಯೂರಪ್ಪ ಏಕೆ ವಿರೋಧಿಸುತ್ತಿದ್ದಾರೆ ಅವರನ್ನೇ ಕೇಳಬೇಕು ಎಂದಿದ್ದಾರೆ.
 
ಬ್ರಿಗೇಡ್‌ಗೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ಜೊತೆ ಮಾತನಾಡುತ್ತಲೇ ಇದ್ದೇನೆ. ಮುಂದಿಯೂ ಸಹ ಬ್ರಿಗೇಡ್‌ನಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

Video: ಅಂಬೇಡ್ಕರ್ ಫೋಟೋ ಮುಂದೆ ಕಾಲ ಮೇಲೆ ಕಾಲು ಹಾಕಿ ಕೂತಿದ್ದ ಲಾಲೂ ಪ್ರಸಾದ್: ಮೋದಿ ವಾಗ್ದಾಳಿ

ಬಿಜೆಪಿ ಪಕ್ಷದೊಳಗಿನ ಅತೃಪ್ತಿ ಬಗ್ಗೆ ಮಾತನಾಡಿದ ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments