Select Your Language

Notifications

webdunia
webdunia
webdunia
webdunia

ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರ ಕಾರಣ ಬಹಿರಂಗ

ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದರ ಕಾರಣ ಬಹಿರಂಗ
ಮಂಗಳೂರು , ಬುಧವಾರ, 2 ಮೇ 2018 (12:20 IST)
ಮಂಗಳೂರು: ಪ್ರಧಾನಿ ಮೋದಿ ರಾಜ್ಯ ಪ್ರವಾಸದಲ್ಲಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಕೇವಲ ಸಮಾವೇಶದಲ್ಲಿ ಭಾಗವಹಿಸಿ ಮರಳಿದ್ದರು.

ಇದಕ್ಕೆ ಕಾರಣವೇನೆಂಬುದು ಇದೀಗ ಬಹಿರಂಗಗೊಂಡಿದೆ. ಪ್ರಧಾನಿ ಭದ್ರತೆ ನೋಡಿಕೊಳ್ಳುವ ಎಸ್ ಪಿಜೆ ಸಿಬ್ಬಂದಿ ಭದ್ರತಾ ಕಾರಣಗಳಿಂದಾಗಿ ಕೃಷ್ಣ ಮಠಕ್ಕೆ ಭೇಟಿ ನೀಡುವುದು ಬೇಡವೆಂದಿದ್ದರು. ಇದರಿಂದಾಗಿ ಮೋದಿ ಕೃಷ್ಣ ಮಠ ಭೇಟಿ ಕಾರ್ಯಕ್ರಮ ರದ್ದಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡದೇ ಇರುವುದು ಬೇಸರ ತಂದಿದೆ ಎಂದಿದ್ದಾರೆ. ಭದ್ರತಾ ಸಿಬ್ಬಂದಿ ಪರಿಶೀಲನೆ ವೇಳೆ ಜೀವ ಭಯವಿದ್ದದ್ದು ಬಯಲಾಗಿತ್ತು. ಹೀಗಾಗಿ ಮೋದಿ ಭೇಟಿಗೆ ನಿರಾಕರಿಸಲಾಗಿತ್ತು. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿಗೂ ಬೇಸರವಾಗಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಜಾಹೀರಾತಿಗೆ ಚುನಾವಣಾ ಆಯೋಗ ಬ್ರೇಕ್!