Publish Date: Thu, 22 Mar 2018 (12:08 IST)
Updated Date: Thu, 22 Mar 2018 (12:10 IST)
ಬೆಂಗಳೂರು: ಕರಾವಳಿ ಜಿಲ್ಲೆಗೆ ಎರಡು ದಿನ ಪ್ರವಾಸ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದರು. ಆದರೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಲಿಲ್ಲ ಎಂಬ ವಿವಾದದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
‘ರಾಹುಲ್ ಗಾಂಧಿಯವರು ಉಡುಪಿಗೇ ಭೇಟಿ ನೀಡಿಲ್ಲ. ಹೀಗಂದ ಮೇಲೆ ಕೃಷ್ಣಮಠಕ್ಕೆ ಭೇಟಿ ನೀಡದಿರುವ ಪ್ರಶ್ನೆ ಎಲ್ಲಿ ಬರುತ್ತದೆ’ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.
ಮೊದಲೇ ನಿಗದಿಯಾದಂತೆ ಶೃಂಗೇರಿ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿ ಸ್ವಾಮೀಜಿಗಳ ಜತೆ ಮಾತುಕತೆ ನಡೆಸಿದ್ದರು. ಆದರೆ ರಾಹುಲ್ ರಾಜ್ಯಕ್ಕೆ ಬರುವ ಮೊದಲೇ ಕೃಷ್ಣ ಮಠಕ್ಕೆ ಬೇಕೆಂದೇ ಭೇಟಿ ನೀಡುತ್ತಿಲ್ಲ ಎಂದು ವಿವಾದ ಎದ್ದಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ