ಡಿಕೆ ಶಿವಕುಮಾರ್ ರನ್ನು ಅಷ್ಟು ಬೇಗ ಬಿಟ್ಟು ಕೊಡಲ್ಲ ರಾಹುಲ್ ಗಾಂಧಿ: ಕಾರಣವೇನು ಗೊತ್ತಾ

Krishnaveni K
ಗುರುವಾರ, 27 ನವೆಂಬರ್ 2025 (09:17 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನ ಜೋರಾಗುತ್ತಿದೆ. ಈ ನಡುವೆ ಡಿಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ಸಂದೇಶ ಬಂದಿದೆ ಎನ್ನಲಾಗಿದೆ. ಅಷ್ಟು ಬೇಗ ಡಿಕೆ ಶಿವಕುಮಾರ್ ರನ್ನು ರಾಹುಲ್ ಮೂಲೆಗುಂಪು ಮಾಡಲ್ಲ. ಅದಕ್ಕೆ ಕಾರಣವೂ ಇದೆ.

ಡಿಕೆ ಶಿವಕುಮಾರ್ ಕೇವಲ ಕರ್ನಾಟಕ ಮಾತ್ರವಲ್ಲ, ದೇಶದ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಸಂಕಷ್ಟ ಬಂದಾಗ ಟ್ರಬಲ್ ಶೂಟರ್ ಆಗಿ ರಾಹುಲ್ ಗಾಂಧಿಗೆ ನೆರವಾಗಿದ್ದಾರೆ. ಈ ಹಿಂದೆ ಗುಜರಾತ್ ನಲ್ಲಿ, ತೆಲಂಗಾಣದಲ್ಲಿ, ರಾಜಸ್ಥಾನ್ ನಲ್ಲಿ ಸಂಕಷ್ಟ ಬಂದಾಗಲೆಲ್ಲಾ ಶಾಸಕರನ್ನು ಹಿಡಿದಿಟ್ಟುಕೊಳ್ಳಲು, ಚುನಾವಣೆ ಸಂದರ್ಭದ ಪ್ರಚಾರದಲ್ಲಿ ಎಲ್ಲದಕ್ಕೂ ಡಿಕೆಶಿ ರಾಹುಲ್ ಗೆ ಸಾಥ್ ನೀಡಿದ್ದಾರೆ.

ಪಕ್ಷ ಸಂಘಟನೆ, ನಾಯಕತ್ವ ಗುಣದಲ್ಲಿ ಡಿಕೆ ಶಿವಕುಮಾರ್ ರನ್ನು ಮೀರುಸುವವರಿಲ್ಲ. ಅವರಿಗೆ ಸ್ವಂತ ವರ್ಚಸ್ಸಿದೆ. ಅಂತಹ ನಾಯಕನನ್ನು ಮೂಲೆಗುಂಪು ಮಾಡುವ ಮೂರ್ಖತನ ರಾಹುಲ್ ಗಾಂಧಿ ತೋರಿಸಲ್ಲ.

ಅದೇ ಕಾರಣಕ್ಕೆ ಈಗ ನೇರವಾಗಿ ಭೇಟಿ ಮಾಡಲು ಅವಕಾಶ ಕೊಡದೇ ಇದ್ದರೂ ಸಂದೇಶ ಕಳುಹಿಸಿ ಸ್ವಲ್ಪ ದಿನ ಕಾಯಿರಿ ಎಂದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಗೆ ರಾಹುಲ್ ಗಾಂಧಿಯಿಂದ ಶುಭ ಸುದ್ದಿಯೇ ಸಿಗಬಹುದು ಎಂಬುದು ಲೆಕ್ಕಾಚಾರವಾಗಿದೆ.

ಭಾರತ ತಂಡ ಇತ್ತೀಚೆಗಿನ ದಿನಗಳಲ್ಲಿ ಎಂದೂ ಇಷ್ಟೊಂದು ದಯನೀಯ ಸ್ಥಿತಿಯಲ್ಲಿರಲಿಲ್ಲ. ಅದರೆ ಅದನ್ನು ಒಪ್ಪಿಕೊಳ್ಳಲು ಗಂಭೀರ್ ತಯಾರಿಲ್ಲ. ಬದಲಾಗಿ ತಮ್ಮನ್ನು ತಾವು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಭಾರತ ತಂಡ ಹಿಂದೆಂದೂ ಕಾಣದಂತಹ ಹೀನಾಯ ಸ್ಥಿತಿಯಲ್ಲಿದ್ದರೂ ತಮ್ಮ ಒಣ ಪ್ರತಿಷ್ಠೆಯನ್ನು ಬಿಡದ ಗಂಭೀರ್ ಗೆ ಈಗ ಅಭಿಮಾನಿಗಳೇ ಹಿಡಿಶಾಪ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments