Webdunia - Bharat's app for daily news and videos

Install App

ಅನ್ಯಧರ್ಮೀಯರಿಗೆ ಬೆಣ್ಣೆ, ಹಿಂದೂಗಳಿಗೆ ಸುಣ್ಣ ಎನ್ನುವ ತಾರತಮ್ಯವೇಕೆ: ಆರ್‌ ಅಶೋಕ್

Sampriya
ಮಂಗಳವಾರ, 10 ಸೆಪ್ಟಂಬರ್ 2024 (15:05 IST)
Photo Courtesy R Ashok
ಬೆಂಗಳೂರು: ಗಣೇಶೋತ್ಸವ ಪೆಂಡಾಲ್ ಗಳಲ್ಲಿ FSSAI ಮಾನ್ಯತೆ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆಗಳು ತಯಾರಿಸಿದ ಪ್ರಸಾದ ಮಾತ್ರವೇ ವಿತರಿಸಬೇಕು ಎಂದು ಫರ್ಮಾನು ಹೊರಡಿಸಿದ್ದ ತುಘಲಕ್ ಸರ್ಕಾರ ಈಗ ಗಣೇಶ ಮೂರ್ತಿಗಳ ವಿಸರ್ಜನೆಯನ್ನ ರಾತ್ರಿ 10 ಗಂಟೆವರೆಗೆ ಮಾತ್ರ ಮಾಡಬೇಕು ಎಂಬ ಅರ್ಥವಿಲ್ಲದ ನಿಯಮ ಹೇರಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೇಸರಿ ಕುಂಕುಮ ಕಂಡರೆ ಉರಿದು ಬೀಳುವ ಕಾಂಗ್ರೆಸ್ ನಾಯಕರಿಗೆ ಹಿಂದೂಗಳ ಹಬ್ಬ, ಜಾತ್ರೆ, ಉತ್ಸವಗಳೆಂದರೆ ಅದೇನೋ ಹೊಟ್ಟೆ ಉರಿ, ತಳಮಳ. ರಂಜಾನ್ ಸಂದರ್ಭದಲ್ಲಿ ನಡೆಯುವ ಇಫ್ತಾರ್ ಕೂಟಗಳಲ್ಲೆಲ್ಲಾ FSSAI ಮಾನ್ಯತೆ ಪಡೆದಿರುವ ಸಂಸ್ಥೆಗಳು, ವ್ಯಕ್ತಿಗಳೇ ಆಹಾರ ತಯಾರಿಸುತ್ತಾರಾ? ಕ್ರಿಸ್ಮಸ್ ಕೇಕ್ ತಯಾರಿಸುವವರೆಲ್ಲ FSSAI ಮಾನ್ಯತೆ ಪಡೆದಿರುತ್ತಾರಾ? ಅನ್ಯಧರ್ಮೀಯರಿಗೆ ಮಾತ್ರ ಬೆಣ್ಣೆ, ಹಿಂದೂಗಳಿಗೆ ಸುಣ್ಣ ಎನ್ನುವ ಈ ತಾರತಮ್ಯ ಏಕೆ? ಜಾತ್ಯತೀತತೆ ಅಂದರೆ ಇದೇನಾ? ಅಥವಾ ರಾಹುಲ್‌ ಅವರು ತೋರಿಸುವ ಸಂವಿಧಾನದಲ್ಲಿ ಹಿಂದೂಗಳು ಎರಡನೇ ದರ್ಜೆ ನಾಗರೀಕರು ಎಂದು ಬರೆಯಲಾಗಿದೆಯಾ?

ಸಣ್ಣ ಸಣ್ಣ ಬಡಾವಣೆಗಳಲ್ಲಿ, ಅಪಾರ್ಟ್ಮೆಂಟ್ ಗಳಲ್ಲಿ, ರಸ್ತೆಗಳ ಬದಿಯಲ್ಲಿ ಗಣೇಶ ಕೂರಿಸುವ ಪದ್ಧತಿ ಇದೆ. ಅವರೆಲ್ಲರೂ ಸಂಜೆ ಶಾಲಾ-ಕಾಲೇಜು, ಉದ್ಯೋಗ, ವ್ಯಾಪಾರದ ಕೆಲಸ ಮುಗಿದ ನಂತರ ಸಂಜೆ ಪೂಜೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಮೆರವಣಿಗೆ ಮೂಲಕ ವಿಸರ್ಜನೆ ಮಾಡುವ ಯೋಜನೆ ಹಾಕಿಕೊಂಡಿರುತ್ತಾರೆ. ಮೇಲಾಗಿ ರಾತ್ರಿ 8-9 ಗಂಟೆ ನಂತರ ಟ್ರಾಫಿಕ್ ಸಮಸ್ಯೆಯೂ ಇರುವುದಿಲ್ಲ. ಆಗ ಮೆರವಣಿಗೆ ಶುರು ಮಾಡಿದರೆ ವಿಸರ್ಜನೆ ಮಾಡುವ ವೇಳೆಗೆ ಕನಿಷ್ಠ ಪಕ್ಷ 11 ಗಂಟೆಯಾದರೂ ಆಗಿರುತ್ತದೆ.

ಈ ನಿಟ್ಟಿನಲ್ಲಿ ಸಾರ್ವಜನಿಕರ ಅನುಕೂಲ ಹಾಗು ಟ್ರಾಫಿಕ್ ಸಮಸ್ಯೆ ಗಮನದಲ್ಲಿಟ್ಟುಕೊಂಡು ಗಣೇಶ ವಿಸರ್ಜನೆ ಸಮಯವನ್ನ ರಾತ್ರಿ 11:30 ರವರೆಗೆ ವಿಸ್ತರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments