Webdunia - Bharat's app for daily news and videos

Install App

ವೆಂಕಯ್ಯ ನಾಯ್ಡು ಮಂಗಳೂರು ನಲ್ಲಿ ವಾಸ್ತವ್ಯ ಮಾಡುತ್ತಿರುವುದು ಯಾಕೆ?ಕಾಂಗ್ರೆಸ್ ಕಿಡಿ

Webdunia
ಗುರುವಾರ, 26 ಏಪ್ರಿಲ್ 2018 (17:32 IST)
ಉಪ ರಾಷ್ಟ್ರಪತಿ  ವೆಂಕಯ್ಯ  ನಾಯ್ಡು ಏಪ್ರಿಲ್ 29 ರಂದು ಹಾಗೂ 30 ರಂದು ಮಂಗಳೂರು ನಲ್ಲಿ  ವಾಸ್ತವ್ಯ ಮಾಡಲಿದ್ದಾರೆ. ಕೇರಳದಲ್ಲಿ  ಕಾರ್ಯಕ್ರಮವಿದ್ದರೂ  ವೆಂಕಯ್ಯ ನಾಯ್ಡು ಮಂಗಳೂರು ನಲ್ಲಿ ವಾಸ್ತವ್ಯ ಮಾಡುತ್ತಿರುವುದು ಯಾಕೆ ಎಂಬುದರ ಬಗ್ಗೆ ಚರ್ಚೆ ನಡಿಯುತ್ತಿದೆ. 
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ  ಯಾವುದೇ ರಾಜಕೀಯ ಪಕ್ಷದ ಮುಖಂಡರು ಉಪ ರಾಷ್ಟ್ರಪತಿ ಅವರನ್ನು ಭೇಟಿ ಮಾಡುವಂತಿಲ್ಲ. 
 
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಏಪ್ರಿಲ್ 29 ರಂದು ದೆಹಲಿ ಯಿಂದ ಮಂಗಳೂರು ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ ಆಗಮಿಸಿ ಕಾಸರಗೋಡ್ ನಲ್ಲಿ ಕೇರಳ ವಿಶ್ವ ವಿದ್ಯಾನಿಲಯದ  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 
 
ಬಳಿಕ ಕಾರ್ಯಕ್ರಮ ಮುಗಿಸಿ ಒಂದು ಗಂಟೆಗೆ ಮಂಗಳೂರು ಗೆ ಆಗಮಿಸಿ ನಗರದ ಖಾಸಗಿ ಹೋಟೆಲನಲ್ಲಿ  ವಾಸ್ತವ್ಯ  ಮಾಡಲಿದ್ದಾರೆ. ಏಪ್ರಿಲ್ 30 ರಂದು ಬೆಳಿಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕೊಚ್ಚಿನ್ ಗೆ ತೆರಳಲಿದ್ದಾರೆ. 
 
ಅಧಿಕೃತ ಕಾರ್ಯಕ್ರಮ ಕೇರಳದಲ್ಲಿ  ಇದ್ದರೂ ಕೂಡ ಉಪರಾಷ್ಟ್ರಪತಿ  ಮಂಗಳೂರುನಲ್ಲಿ ಯಾಕೆ ವಾಸ್ತವ್ಯ ಮಾಡುತ್ತಿದ್ದಾರೆ ಎಂಬುದರ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು  ನಡೆಯುತ್ತಿವೆ. ವೆಂಕಯ್ಯ ನಾಯ್ಡು ಅವರು ಈ ಹಿಂದೆ ಕರ್ನಾಟಕ ದಿಂದ ರಾಜ್ಯ ಸಭೆಯನ್ನು ಪ್ರತಿನಿಧಿಸಿದ್ದರು, ಸಚಿವರಾಗಿದ್ದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದರು‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments