Webdunia - Bharat's app for daily news and videos

Install App

ರೈತರ ಸಾಲ ಮನ್ನಾ ಬಗ್ಗೆ ಬಿಎಸ್‌ವೈ ಏಕೆ ಪ್ರಧಾನಿಯನ್ನು ಕೇಳುತ್ತಿಲ್ಲ: ಮಧು ಬಂಗಾರಪ್ಪ

Webdunia
ಗುರುವಾರ, 20 ಏಪ್ರಿಲ್ 2017 (15:46 IST)
ರಾಜ್ಯದಾದ್ಯಂತ ಭೀಕರ ಬರಗಾಲ ತಾಂಡವವಾಡುತ್ತಿದ್ದರೂ ರೈತರ ಸಾಲ ಮನ್ನಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕೆ ಪ್ರಧಾನಿ ಮೋದಿಯವರನ್ನು ಕೇಳುತ್ತಿಲ್ಲ ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ.
 
ಕೇಂದ್ರದಲ್ಲಿ ಬಿಜೆಪಿ ಸರಕಾರವಿರುವುದರಿಂದ ಮಾಜಿ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಯವರಿಗೆ ಬರ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿ ರೈತರ ಸಾಲ ಮನ್ನಾಗೊಳಿಸಲು ಪ್ರಯತ್ನಿಸದಿರುವುದು ನೋಡಿದಲ್ಲಿ ಬಿಜೆಪಿ ರೈತ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದರು.
 
ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದಲ್ಲಿ ತಾವು ಸಾಲ ಮನ್ನಾ ಮಾಡುವುದಾಗಿ ಹೇಳುತ್ತಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ತಿಕ್ಕಾಟದಿಂದಾಗಿ ರೈತ ಕಂಗಾಲಾಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರೈತರು ಇಂದಲ್ಲ ನಾಳೆ ಸಾಲ ಮನ್ನಾವಾಗುವುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಉಭಯ ಸರಕಾರಗಳು ರೈತರೊಂದಿಗೆ ಚೆಲ್ಲಾಟವಾಡುತ್ತಿವೆ. ಮುಂಬರುವ ದಿನಗಳಲ್ಲಿ ಎರಡು ಪಕ್ಷಗಳಿಗೆ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

Karnataka Weather: ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಣೆ, ಒಂದು ವಾರ ಧಾರಾಕಾರ ಮಳೆ ಸಾಧ್ಯತೆ

ಡೋನಾಲ್ಡ್‌ ಟ್ರಂಪ್‌ ಜೊತೆ ಮುನಿಸಿಕೊಂಡ ಬೆನ್ನಲ್ಲೇ ಹೊಸ ರಾಜಕೀಯ ಪಕ್ಷ ಘೋಷಿಸಿದ ಇಲಾನ್ ಮಸ್ಕ್

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮುಂದಿನ ಸುದ್ದಿ
Show comments