Webdunia - Bharat's app for daily news and videos

Install App

ರೈತರ ಸಾಲ ಮನ್ನಾ ಬಗ್ಗೆ ಬಿಎಸ್‌ವೈ ಏಕೆ ಪ್ರಧಾನಿಯನ್ನು ಕೇಳುತ್ತಿಲ್ಲ: ಮಧು ಬಂಗಾರಪ್ಪ

Webdunia
ಗುರುವಾರ, 20 ಏಪ್ರಿಲ್ 2017 (15:46 IST)
ರಾಜ್ಯದಾದ್ಯಂತ ಭೀಕರ ಬರಗಾಲ ತಾಂಡವವಾಡುತ್ತಿದ್ದರೂ ರೈತರ ಸಾಲ ಮನ್ನಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕೆ ಪ್ರಧಾನಿ ಮೋದಿಯವರನ್ನು ಕೇಳುತ್ತಿಲ್ಲ ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ.
 
ಕೇಂದ್ರದಲ್ಲಿ ಬಿಜೆಪಿ ಸರಕಾರವಿರುವುದರಿಂದ ಮಾಜಿ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಯವರಿಗೆ ಬರ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿ ರೈತರ ಸಾಲ ಮನ್ನಾಗೊಳಿಸಲು ಪ್ರಯತ್ನಿಸದಿರುವುದು ನೋಡಿದಲ್ಲಿ ಬಿಜೆಪಿ ರೈತ ವಿರೋಧಿ ಎನ್ನುವುದು ಸಾಬೀತಾಗಿದೆ ಎಂದರು.
 
ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದಲ್ಲಿ ತಾವು ಸಾಲ ಮನ್ನಾ ಮಾಡುವುದಾಗಿ ಹೇಳುತ್ತಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ತಿಕ್ಕಾಟದಿಂದಾಗಿ ರೈತ ಕಂಗಾಲಾಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರೈತರು ಇಂದಲ್ಲ ನಾಳೆ ಸಾಲ ಮನ್ನಾವಾಗುವುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಉಭಯ ಸರಕಾರಗಳು ರೈತರೊಂದಿಗೆ ಚೆಲ್ಲಾಟವಾಡುತ್ತಿವೆ. ಮುಂಬರುವ ದಿನಗಳಲ್ಲಿ ಎರಡು ಪಕ್ಷಗಳಿಗೆ ರೈತರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments