Webdunia - Bharat's app for daily news and videos

Install App

ಗಂಡ ಬ್ಲೌಸ್ ಹೊಲಿದಿದ್ದು ಸರಿಯಾಗಿಲ್ಲವೆಂದು ಹೆಂಡತಿ ಆತ್ಮಹತ್ಯೆ!

Webdunia
ಮಂಗಳವಾರ, 7 ಡಿಸೆಂಬರ್ 2021 (19:26 IST)
35 ವರ್ಷದ ವಿಜಯಲಕ್ಷ್ಮಿ ಎಂಬ ಮಹಿಳೆಗೆ ತನ್ನ ಗಂಡ ತನಗಾಗಿ ಹೊಲಿದು ತಂದ ಬ್ಲೌಸ್​ ಡಿಸೈನ್ ಇಷ್ಟವಾಗಲಿಲ್ಲ. ಇದರಿಂದ ಕೋಪಗೊಂಡ ಆಕೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾಳೆ.ಗಂಡ-ಹೆಂಡತಿ ನಡುವೆ ಜಗಳಗಳು ಸಾಮಾನ್ಯ. ಆದರೆ, ಕೆಲವು ಬಾರಿ ಸಣ್ಣಪುಟ್ಟ ಜಗಳಗಳೇ ಪ್ರಾಣಕ್ಕೆ ಹಾನಿ ಉಂಟುಮಾಡಿದ ಘಟನೆಗಳೂ ನಡೆದಿವೆ. ಹೈದರಾಬಾದ್‌ನಲ್ಲಿ ಟೈಲರ್ ಆಗಿರುವ ತನ್ನ ಗಂಡನೊಂದಿಗೆ ಬ್ಲೌಸ್​ ವಿಚಾರದಲ್ಲಿ ಜಗಳ ನಡೆದಿದ್ದು, ಬೇಸತ್ತ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 35 ವರ್ಷದ ವಿಜಯಲಕ್ಷ್ಮಿ ಎಂಬ ಮಹಿಳೆಗೆ ತನ್ನ ಗಂಡ ತನಗಾಗಿ ಹೊಲಿದು ತಂದ ಬ್ಲೌಸ್​ ಡಿಸೈನ್ ಇಷ್ಟವಾಗಲಿಲ್ಲ. ಇದರಿಂದ ಕೋಪಗೊಂಡ ಆಕೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾಳೆ.
 
ಆ ಮಹಿಳೆ ತನ್ನ ಪತಿ ಶ್ರೀನಿವಾಸ್ ಜೊತೆ ಜಗಳವಾಡಿದ್ದಳು. ಇದರಿಂದ ಬೇಸತ್ತ ಶ್ರೀನಿವಾಸ್ ಮನೆಯಿಂದ ಹೊರಗೆ ಹೋಗಿದ್ದರು. ಗಂಡನ ಜೊತೆ ಜಗಳವಾಡಿದ ನಂತರ ವಿಜಯಲಕ್ಷ್ಮಿ ತನ್ನ ರೂಮಿಗೆ ಬೀಗ ಹಾಕಿ ಮಲಗಿದ್ದಳು. ನಂತರ, ಆಕೆಯ ಮಕ್ಕಳು ಶಾಲೆಯಿಂದ ಮನೆಗೆ ಹಿಂದಿರುಗಿದಾಗ, ಬೆಡ್ ರೂಮಿನ ಬಾಗಿಲಿಗೆ ಬೀಗ ಹಾಕಿರುವುದನ್ನು ಕಂಡು ಅದನ್ನು ತೆಗೆಯಲು ಪ್ರಯತ್ನಿಸಿದರು. ಆದರೆ, ಯಾವ ಪ್ರತಿಕ್ರಿಯೆಯೂ ಬಾರದ ಕಾರಣ ಆ ಮಕ್ಕಳು ಅಪ್ಪನಿಗೆ ಫೋನ್ ಮಾಡಿ ವಿಷಯ ತಿಳಿಸಿದರು. ಬಳಿಕ ಆ ಮಹಿಳೆಯ ಗಂಡ ಶ್ರೀನಿವಾಸ್ ಮನೆಗೆ ಹಿಂತಿರುಗಿ ರೂಮಿನ ಬಾಗಿಲು ಒಡೆದಾಗ ವಿಜಯಲಕ್ಷ್ಮೀ ನೆಲದ ಮೇಲೆ ಬಿದ್ದಿರುವುದು ಕಾಣಿಸಿತು.
ಹೈದರಾಬಾದ್​ನ ಅಂಬರ್‌ಪೇಟ್ ಪ್ರದೇಶದ ಗೋಲ್ನಾಕ ತಿರುಮಲ ನಗರದಲ್ಲಿ ದಂಪತಿಗಳು ಒಟ್ಟಿಗೆ ವಾಸಿಸುತ್ತಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಗಂಡ ತನಗೆ ಚೆನ್ನಾಗಿರುವ ಡಿಸೈನ್​ನ ಬ್ಲೌಸ್​ ಹೊಲಿದು ಕೊಟ್ಟಿಲ್ಲ ಎಂಬ ಕಾರಣಕ್ಕೆ ಜಗಳವಾಡಿದ ಹೆಂಡತಿ ತನ್ನ ರೂಮಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments