Webdunia - Bharat's app for daily news and videos

Install App

ಪತಿಯ ಹತ್ಯೆಗೆ ಸುಪಾರಿ ಕೊಟ್ಟು ಸಿಕ್ಕಿಬಿದ್ದ ಪತ್ನಿ

Webdunia
ಮಂಗಳವಾರ, 7 ಜೂನ್ 2022 (09:00 IST)
ಚಿಕ್ಕಬಳ್ಳಾಪುರ: ಪತಿಯ ಹತ್ಯೆಗೆ ಸುಪಾರಿ ಕೊಟ್ಟು ಬಳಿಕ ಪತಿಯ ಜೊತೆಗೇ ಪೊಲೀಸ್ ಠಾಣೆಗೆ ಬಂದು ದೂರು ಕೊಡುವ ನಾಟಕವಾಡಿ ಪತ್ನಿ ಈಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಕಚೇರಿಗೆ ಸಹೋದ್ಯೋಗಿಗಳೊಂದಿಗೆ ಕಾರಿನಲ್ಲಿ ಹೋಗುವಾಗ ಅಡ್ಡಗಟ್ಟಿದ್ದ ಆರೋಪಿಗಳು ದಾಳಿ ನಡೆಸಿ ಹತ್ಯೆಗೆ ಪ್ರಯತ್ನಿಸಿದ್ದರು. ಆದರೆ ಕಾರಿನ ಡೋರ್ ಲಾಕ್ ಆಗಿದ್ದರಿಂದ ಕೇವಲ ಗಾಜು ಒಡೆದಿತ್ತಷ್ಟೇ. ದುಷ್ಕೃತ್ಯಕ್ಕೆ ಮುಂದಾಗುವ ಮೊದಲೇ ಸ್ಥಳೀಯರು ಬಂದಿದ್ದರಿಂದ ಆರೋಪಿಗಳು ಪರಾರಿಯಾಗಿದ್ದಾರೆ.

ಈ ಸಂಬಂಧ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ವಿಚಾರಣೆ ನಡೆಸಿ ಓರ್ವನನ್ನು ಬಂಧಿಸಿದ್ದರು. ಅದರಂತೆ ವಿಚಾರಣೆ ನಡೆಸಿದಾಗ ಪತ್ನಿಯೇ ಪತಿಯನ್ನು ಕೊಲ್ಲಲು 40 ಲಕ್ಷ ರೂ.ಗೆ ಸುಪಾರಿ ಕೊಟ್ಟ ವಿಚಾರ ಬೆಳಕಿಗೆ ಬಂದಿತ್ತು. ಪತ್ನಿ ಚೀಟಿ ಹಣದಿಂದ ನಷ್ಟ ಅನುಭವಿಸಿದ್ದಳು. ಅದನ್ನು ತುಂಬಿಕೊಡಲು ಗಂಡನ ಆಸ್ತಿಯ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ಇದಕ್ಕಾಗಿ ಆತನನ್ನು ಕೊಲೆ ಮಾಡಿ ಆಸ್ತಿ ಹೊಡೆಯುವ ಯೋಜನೆ ಹಾಕಿದ್ದಳು. ಅದೀಗ ವಿಫಲವಾಗಿ ಜೈಲು ಕಂಬಿ ಎಣಿಸುವಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments