Webdunia - Bharat's app for daily news and videos

Install App

ರುಚಿಯಾಗಿ ಚಿಕನ್ ಫ್ರೈ ಮಾಡಿಲ್ಲ ಅಂತ ಪತ್ನಿಯನ್ನೇ ಕೊಂದ ಪತಿ!

Webdunia
ಸೋಮವಾರ, 23 ಆಗಸ್ಟ್ 2021 (20:22 IST)
ರುಚಿಯಾಗಿ ಚಿಕನ್ ಫ್ರೈ ಮಾಡಿಕೊಟ್ಟಿಲ್ಲ ಎಂದು ಪತ್ನಿಯನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತರಬನಹಳ್ಳಿ ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಇದೀಗ ಆರೋಪಿ ಪತಿ ಮುಬಾರಕ್‌ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಆಗಸ್ಟ್ 18 ರಂದು ಪತ್ನಿಯನ್ನು ಪತಿಯೇ ಕೊಲೆ ಮಾಡಿದ್ದ. ಬಳಿಕ, ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಪತ್ನಿ ಶಿರೀನ್ ಬಾನು (25) ಎಂಬಾಕೆಯನ್ನು ಪತಿ ಮುಬಾರಕ್ ಕೊಲೆ ಮಾಡಿದ್ದ.
ಶಿರೀನ್ ಬಾನು ಹತ್ಯೆಗೈದು ಆಕೆಯ ಮೃತದೇಹವನ್ನು ಸ್ವತಃ ಪತಿಯೇ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಈ ವಿಷಯ ತಿಳಿಯದೆ ಶಿರೀನ್ ಬಾನುಗಾಗಿ ಪೋಷಕರು ಹುಡುಕಾಟ ನಡೆಸಿದ್ದರು. ಬಳಿಕ, ಶಿರೀನ್ ಪತಿ ಮುಬಾರಕ್ ಮೇಲೆ ಪೋಷಕರಿಗೆ ಅನುಮಾನ ಉಂಟಾಗಿತ್ತು. ಹೀಗಾಗಿ ಮುಬಾರಕ್‌ನನ್ನು ಬಂಧಿಸಿ ವಿಚಾರಿಸುವಂತೆ, ಶಿರೀನ್ ಬಾನು ಪೋಷಕರು ಒತ್ತಡ ಹಾಕಿದ್ದರು. ಬಳಿಕ, ಇಂದು (ಆಗಸ್ಟ್ 23) ವಕೀಲರೊಂದಿಗೆ ಮುಬಾರಕ್ ಠಾಣೆಗೆ ಹಾಜರಾಗಿದ್ದಾರೆ. ಸೋಲದೇವನಹಳ್ಳಿ ಪೊಲೀಸರ ವಿಚಾರಣೆ ವೇಳೆ ಮುಬಾರಕ್ ತಪ್ಪೊಪ್ಪಿಗೆ ಮಾಡಿಕೊಂಡಿದ್ದಾನೆ.
ಮುಬಾರಕ್ (32) ಕೊಲೆ ಮಾಡಿದ ಪತಿ, ಆತ ಹಾಸಿಗೆ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಎರಡು ವರ್ಷದ ಹಿಂದೆ ದಾವಣಗೆರೆಯಿಂದ ಬಂದು ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದರು. ಆದರೆ, ಗಂಡನ ಹೇಯಕೃತ್ಯದಿಂದ ಊಟದ ವಿಷಯವಾಗಿ ಮಡದಿಯ ಕೊಲೆ ನಡೆದಿದೆ ಎಂದು ತಿಳಿದುಬಂದಿದೆ.
ಗಂಡ ಮುಬಾರಕ್, ಶಿರೀನ್​ರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ಚಿಕ್ಕಬಾಣಾವರ ಕೆರೆಗೆ ಎಸೆದಿದ್ದ. ಮೃತ ದೇಹವನ್ನ ಬೈಕ್ ನಲ್ಲಿ ಸಾಗಿಸಿ ಕೆರೆಗೆ ಎಸೆದಿದ್ದ ಎಂದು ಮಾಹಿತಿ ಲಭ್ಯವಾಗಿದೆ. ಈಗ ಪೊಲೀಸರಿಂದ ಕೆರೆಯಲ್ಲಿ ಶವ ಹುಡುಕಾಡಲು ಸಿದ್ದತೆ ನಡೆಸಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments