ಪತ್ನಿ ಕೊಂದು, ಪತಿಯೂ ಆತ್ಮಹತ್ಯೆ

Webdunia
ಗುರುವಾರ, 3 ಆಗಸ್ಟ್ 2023 (16:42 IST)
ಪತ್ನಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿಯು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್​ನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾ ಕಾಲೋನಿಯಲ್ಲಿ ನಡೆದಿದೆ. ಲಕ್ಷ್ಮಮ್ಮ ಪತಿಯಿಂದಲೇ ದಾರುಣವಾಗಿ ಕೊಲೆಯಾದ ಮಹಿಳೆಯಾಗಿದ್ದು, ಪತಿ ವೆಂಕಟಸ್ವಾಮಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರಿಗೆ ಮದುವೆಯನ್ನೂ ಮಾಡಿ ಮುಗಿಸಿದ್ದರು. ದಂಪತಿ ನಡುವೆ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆಯಾಗಿದ್ದು, ಪತ್ನಿಯನ್ನ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಬಳಿಕ ವಿಷ ಸೇವಿಸಿ ಪತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಅಕ್ಕಪಕ್ಕದ ಮನೆಯ ನಿವಾಸಿಗಳು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments