Webdunia - Bharat's app for daily news and videos

Install App

ಪತಿಯ ಎದೆಗೆ ಚಾಕುವಿನಿಂದ ಇರಿದು ಕೊಂದ ಪತ್ನಿ

Webdunia
ಗುರುವಾರ, 21 ಡಿಸೆಂಬರ್ 2023 (16:00 IST)
ಪತ್ನಿಯೇ ತನ್ನ ಗಂಡನನ್ನು ಎದೆಗೆ ಚೂರಿ ಹಾಕಿ ಕೊಂದ  ಭಯಾನಕ ಘಟನೆ ನಡೆದಿದೆ. ಅನೈತಿಕ ಸಂಬಂಧದ  ಬಗ್ಗೆ ಸಂಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಜಗಳ ಆರಂಭವಾಗಿ ಈ ಕೊಲೆ ನಡೆದಿದೆ.
 
ಹುಳಿಮಾವು ಸಮೀಪದ ಪುಲ್ಲಿಂಗ್ ಪಾಸ್ ಕಾಲೇಜಿನ ಬಳಿ ಈ ಘಟನೆ ನಡೆದಿದೆ. ಉಮೇಶ್ ದಾಮಿ (27) ಎಂಬಾತನನ್ನು ಆತನ ಪತ್ನಿ ಮನಿಷಾ ದಾಮಿ ಕೊಲೆ ಮಾಡಿದ್ದಾಳೆ.ಉಮೇಶ್‌ ದಾಮಿ ಮತ್ತು ಮನೀಷಾ ಹೊರರಾಜ್ಯದವರು. ಇಲ್ಲಿನ ಕಾಲೇಜಿನಲ್ಲಿ ಸೆಕ್ಯುರಿಟಿ ಹಾಗು ಹೌಸ್ ಕೀಪಿಂಗ್ ಕೆಲಸ‌ ಮಾಡುತ್ತಿದ್ದರು. ಕಾಲೇಜು ಆವರಣದಲ್ಲೇ ಅವರ ವಾಸವಿತ್ತು.
 
ಬುಧವಾರ ರಾತ್ರಿ ಉಮೇಶ್‌ ಗೆಳೆಯನೊಂದಿಗೆ ಎಣ್ಣೆ ಪಾರ್ಟಿಗೆ ಹೋಗಿದ್ದ. ಕುಡಿತ ಎಲ್ಲ ಮುಗಿಸಿ ರಾತ್ರಿ 12 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗಿದ್ದ. ಈ ವೇಳೆ ಮನಿಷಾ ಯಾರೊಂದಿಗೋ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದನ್ನು ಕಂಡು ಮೊದಲೇ ಮತ್ತಿನಲ್ಲಿದ್ದ ಉಮೇಶನಿಗೆ ಸಿಟ್ಟು ನೆತ್ತಿಗೇರಿದೆ.ನಿನಗೆ ಯಾರೊಂದಿಗೋ ಅನೈತಿಕ ಸಂಬಂಧವಿದೆ. ಹೀಗಾಗಿ ನೀನು ಅವರ ಜತೆ ಈ ಮಧ್ಯರಾತ್ರಿಯಲ್ಲಿ ಮಾತನಾಡುತ್ತಿದ್ದೀಯಾ, ಯಾರದು ಹೇಳು ಎಂದು ಆತ ಆಕೆಯ ಕೈಯಲ್ಲಿದ್ದ ಮೊಬೈಲ್‌ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಆಗ ಅವರಿಬ್ಬರ ನಡುವೆ ಜಗಳ ವಿಕೋಪಕ್ಕೆ ಹೋಗಿದೆ.
 
ತನ್ನ ಮೇಲೆ ಸಂಶಯ ವ್ಯಕ್ತಪಡಿಸಿದ್ದರಿಂದ ಕೆರಳಿದ ಮನೀಷಾ ಚಾಕು ತೆಗೆದುಕೊಂಡು ಬಂದು ಉಮೇಶ್ ದಾಮಿಗೆ ಇರಿದಿದ್ದಾಳೆ. ನೇರವಾಗಿ ಎದೆಗೇ ಚೂರಿಯಿಂದ ಇರಿದಿದ್ದರಿಂದ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಉಮೇಶ್ ದಾಮಿ.
ಬಳಿಕ ಈ ವಿಷಯ ಹೊರಗಡೆ ತಿಳಿದು ಕೂಡಲೇ ಪೊಲೀಸರು ಆಗಮಿಸಿದರು. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹುಳಿಮಾವು ಪೊಲೀಸರು ಆರೋಪಿ ಮನಿಷಾಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರಲಿದೆಯೇ ಇಲ್ಲಿದೆ ಸಂಪೂರ್ಣ ಹವಾಮಾನ ವರದಿ

ಮುಂದಿನ ಸುದ್ದಿ
Show comments