ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ರಾಡ್ನಿಂದ ಥಳಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಭದ್ರಾವತಿ ನಗರದ ಹೆಚ್.ಕೆ.ಜಕ್ಷನ್ನಲ್ಲಿ ನಡೆದಿದೆ.
ಹತ್ಯೆಗೊಳಗಾದ ಮೃತ ಪತಿಯನ್ನು ಸದಾಶಿವಪ್ಪ (50) ಎನ್ನಲಾಗಿದ್ದು, ಈತನ ಪತ್ನಿ ಕಮಲಮ್ಮ(45) ಕಬ್ಬಿಣದ ರಾಡ್ನಿಂದ ಮನ ಬಂದಂತೆ ಥಳಿಸಿ ಹತ್ಯೆಗೈದಿದ್ದಾಳೆ ಎಂದು ತಿಳಿದು ಬಂದಿದೆ.
ಭದ್ರಾವತಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಅಲ್ಲದೆ ವಿಚಾರಣೆಗೊಳಪಡಿಸಿ ತನಿಖೆ ಮುಂದುವರಿಸಿದ್ದಾರೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ.