Webdunia - Bharat's app for daily news and videos

Install App

ಪ್ರೀತಿಸಿ ಮದುವೆಯಾದ ಪತಿಯನ್ನೇ ಕೊಂದ ಪ್ರೇಮಿ

Webdunia
ಬುಧವಾರ, 4 ಆಗಸ್ಟ್ 2021 (21:23 IST)
ಪ್ರೀತಿಸಿ ಮದುವೆಯಾದ ಪತಿಯನ್ನೇ ಪತ್ನಿಯೊಬ್ಬಳು ಮತ್ತೊಬ್ಬ ಪ್ರೇಮಿ ಜತೆ ಸೇರಿ ಕೊಲೆಗೈದಿರುವ ಘಟನೆ ಕೆಂಪೇಗೌಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಂಡ್ಯ ಮೂಲದ ಕಾರ್ತಿಕ್ (25) ಕೊಲೆಯಾದ ವ್ಯಕ್ತಿ. ಮೃತನ ಪತ್ನಿ ರಂಜಿತಾ (24), ಆಕೆಯ ಪ್ರಿಯಕರ ಮಂಡ್ಯ ಮೂಲದ ಕೋಡಿ ಗ್ರಾಮದ ಎಂ.ಎಸ್. ಸಂಜೀವ್ (28)  ಹಾಗೂ ಹಾಸನ ಮೂಲದ ಆರ್. ಆರ್. ಸುಬ್ರಮಣ್ಯ (20) ಬಂಧಿತರು. 
ಮಂಡ್ಯದ ಮೂಲದ ಕೀಲಾರ ಮೂಲದ ಕಾರ್ತಿಕ ಹಾಗೂ ರಂಜಿತಾ ಇಬ್ಬರು ಐದು ವರ್ಷಗಳಿಂದ ಪ್ರೀತಿ ಮಾಡಿ ಮದುವೆ ಮಾಡಿಕೊಂಡಿದ್ದರು. ದಂಪತಿ ಬದುಕು ಕಟ್ಟಿಕೊಳ್ಳಲೆಂದು ಬೆಂಗಳೂರಿಗೆ ಬಂದು, ಕಾರ್ತಿಕ್ ತನ್ನ ಸ್ನೇಹಿತ ಚಾಮರಾಜಪೇಟೆಯ ಬಂಡಿ ಮಹಾಕಾಳಮ್ಮ ದೇವಾಲಯ ಹಿಂಭಾಗ ವಾಸವಿರುವ ಸಂಜೀವ್ ಮನೆಯಲ್ಲಿ ನೆಲೆಸಿದ್ದರು. ಈ ಇಬ್ಬರು ಸ್ನೇಹಿತರು ವೃತ್ತಿಯಲ್ಲಿ ಆಟೋಚಾಲಕರಾಗಿದ್ದು ಜೀವನ ನಡೆಸುತ್ತಿದ್ದರು. ದಿನ ಕಳೆದಂತೆ ಕಾರ್ತಿಕ್ ಪತ್ನಿಯ ಮೋಹಕ್ಕೆ ದಾಸನಾದ ಸಂಜೀವ್ ಆಕೆಯ ಜತೆ ಅಕ್ರಮ ಸಂಬಂಧ ಬೆಳೆಸೆಬಿಟ್ಟಿದ್ದ. ಗಂಡನಿದ್ದರೂ ಪರ ಪುರುಷನ ಕಾಮದಾಟಕ್ಕೆ ಮನಸೋತ ರಂಜಿತಾ ತನ್ನ ಅಕ್ರಮ ಸಂಬಂಧ ಸಲಿಸಾಗಲೆಂದು ತನ್ನ ಪತಿಯನ್ನೇ ಮುಗಿಸಲು ಸಂಚು ರೂಪಿಸಿದ್ದಳು. 
ಸಂಜೀವ್ ಮತ್ತು ರಂಜಿತ ರೂಪಿಸಿದ ಸಂಚಿನಂತೆ ಜುಲೈ29 ರಂದು ಕಾರ್ತಿಕ್ ಗೆ ಮದ್ಯ ಕುಡಿಸಿ ಮತ್ತೊಬ್ಬ ಸ್ನೇಹಿತ ಸುಬ್ರಮಣ್ಯ ಜತೆ ಆಟೋದಲ್ಲಿ ಚನ್ನಪಟ್ಟಣಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಕಾರ್ತಿಕ್ ಮೇಲೆ ಸಂಜೀವ್ ಹಾಗೂ ಸುಬ್ರಮಣ್ಯ ಚಾಕು, ರಾಡ್ ನಿಂದ ಹಲ್ಲೆ ನಡೆಸಿ ತಲೆಮೇಲೆ ಕಲ್ಲುಹಾಕಿ ಕೊಲೆಗೈದಿದ್ದರು. ಬಳಿಕ ಶವವನ್ನು ಚೀಲದಲ್ಲಿ ತುಂಬಿಕೊಂಡು ಬಂದು ಮೈಸೂರು ರಸ್ತೆಯ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಬಳಿ ನಿರ್ಜನ ಪ್ರದೇಶದಲ್ಲಿ ಪೊದೆಯೊಳಗೆ ಇಟ್ಟು ಹೋಗಿದ್ದರು. 
ಮೃತನ ಸಹೋದರಿ ಕೀರ್ತನಾ ನೀಡಿದ ದೂರಿನನ್ವಯ ಪೊಲೀಸರು ತನಿಖೆ ನಡೆಸಿದ್ದಾರೆ. ಬಳಿಕ ಮೃತನ ಪತ್ನಿ ರಂಜಿತಾ ಹಾಗೂ ಸಂಜೀವ್ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ತಿಳಿದಿಬಂದಿದೆ.‌ಸದ್ಯ ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಅನುಮಾನಬರಬಾರದೆಂದು ಪತ್ನಿಯಿಂದ ದೂರು: 
ರಂಜೀತ ಪ್ರಿಯಕರ ಸಂಜೀವ್ ಜುಲೈ 29 ರಂದು ಕಾರ್ತಿಕ್ ನನ್ನು ಕರೆದುಕೊಂಡು ಹೋಗಿದ್ದ. ಬಳಿಕ ಕೊಲೆ ಮಾಡಿರುವ ಬಗ್ಗೆ ಯಾರಿಗೂ ಅನುಮಾನ ಬರಬಾರದೆಂದು ಆಗಸ್ಟ್ 1 ರಂದು ರಂಜಿತಾ, ತನ್ನ ಪತಿ ಕಾರ್ತಿಕ್ ಕಾಣೆಯಾಗಿರುವ ಬಗ್ಗೆ ಕೆಂಪೇಗೌಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ವೇಳೆ ಅನುಮಾನಗೊಂಡ ಪೊಲೀಸರು ರಂಜಿತಾ ಹಾಗೂ ಸಂಜೀವ್ ವಿಚಾರಣೆ ನಡೆಸಿದಾಗ ಕೊಲೆಯಾಗಿರುವ ನಿಜಾಂಶ ಹೊರಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments