ವೇಶ್ಯಾವೃತ್ತಿ ಮಾಡೋದಿಲ್ಲ ಎಂದ ಪತ್ನಿಯನ್ನು ಕೊಲೆಗೈದ ಪತಿ!

Webdunia
ಶನಿವಾರ, 12 ಜನವರಿ 2019 (17:58 IST)
ವೇಶ್ಯಾವೃತ್ತಿ ಮಾಡಲು ನಿರಾಕರಿಸಿದ ಪತ್ನಿಯನ್ನು ಕೊಲೆಗೈದ ಪತಿ ಶವವನ್ನು ಹೊಲದಲ್ಲಿ ಹೂತು ಪರಾರಿಯಾಗಿರುವ ಘಟನೆ ನಡೆದಿದೆ.

ದೊಡ್ಡಬಳ್ಳಾಪುರದ ದುರ್ಗೇಹಳ್ಳಿಯಲ್ಲಿ ಈ ಘಟನೆ ನಡೆದಿದೆ. ದುರ್ಗೇಹಳ್ಳಿಯಲ್ಲಿ ಶ್ರೀನಿವಾಸ್ ಕೊಲೆಗೈದ ಆರೋಪಿ. ದುರ್ಗೇಹಳ್ಳಿಯ ಮಹಿಳೆಯನ್ನೇ ಪ್ರೀತಿಸಿ ಶ್ರೀನಿವಾಸ್ ಎರಡನೇ ಮದುವೆಯಾಗಿದ್ದನು. ಕೆಲವು ದಿನಗಳ ಬಳಿಕ ಶ್ರೀನಿವಾಸ್, ಪತ್ನಿಯನ್ನು ವೈಶ್ಯಾವಾಟಿಕೆಗೆ ತಳ್ಳಲು ಪ್ರಯತ್ನಿಸುತ್ತಿದ್ದು ಇದಕ್ಕೆ ಪತ್ನಿ ನಿರಾಕರಿಸುತ್ತಿದ್ದಳು. ಇದೇ ವಿಷಯಾಗಿ ದಂಪತಿ ನಡುವೆ ಜಗಳವಾಗುತ್ತಿತ್ತು.

.10 ರಂದು ರಾತ್ರಿ ಸ್ನೇಹಿತರನ್ನು ಮನೆಗೆ ಕರೆಸಿದ ಶ್ರೀನಿವಾಸ್, ಅವರೊಂದಿಗೆ ಸಹಕರಿಸುವಂತೆ ಹೆಂಡತಿಗೆ ಒತ್ತಾಯಿಸಿದ್ದು ಆಕೆ ನಿರಾಕರಿಸಿದ್ದರಿಂದ ಕೋಪಗೊಂಡ ಶ್ರೀನಿವಾಸ್ ಹಲ್ಲೆ ಮಾಡಿ  ಕೊಲೆಗೈದಿದ್ದಾನೆ. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಪತ್ನಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಬಳಿಕ ಶವವನ್ನು ತೊಗರಿ ಹೊಲದಲ್ಲಿ ಹೂತು ಅದರ ಮೇಲೆ ತೊಗರಿ ಗಿಡಗಳನ್ನು ಇಟ್ಟು ಪರಾರಿಯಾಗಿದ್ದಾನೆ.

ಕುರಿ ಕಾಯಲು ಹೋದ ಕುರಿಗಾಯಿಗಳಿಗೆ ನಿನ್ನೆ ಮಧ್ಯಾಹ್ನ  ಹುಡುಗರಿಗೆ ತೊಗರಿ ಹೊಲದಲ್ಲಿದ್ದ ಶವ ಕಣ್ಣಿಗೆ ಬಿದ್ದಿದೆ. ತಕ್ಷಣವೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ  ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ನಂತರ ಶ್ರೀನಿವಾಸ್ ಕುಟುಂಬ ಮನೆಗೆ ಬೀಗ ಹಾಕಿ ತಲೆ ಮರೆಸಿಕೊಂಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿನ 14 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ, ಕಾರಣ ಇಲ್ಲಿದೆ

ನಾಳೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ

ಮತಗಳ್ಳತನದ ವಿರುದ್ಧ ಸಹಿ ಸಂಗ್ರಹಿಸಿ ಎಐಸಿಸಿಗೆ ಒಪ್ಪಿಸಿದ ಡಿಕೆ ಶಿವಕುಮಾರ್

ನನ್ನ ಹೆಸರಿನಲ್ಲಿ ನಕಲಿ ಸುದ್ದಿ ಪ್ರಕಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಿಟಿ ರವಿ

ಮೋದಿಯನ್ನು ನಾನು ಸ್ವಲ್ಪ ಹೆಚ್ಚು ಪ್ರೀತಿಸುತ್ತೇನೆ: ಚಿರಾಗ್ ಪಾಸ್ವಾನ್‌

ಮುಂದಿನ ಸುದ್ದಿ
Show comments