Webdunia - Bharat's app for daily news and videos

Install App

ಪತ್ನಿ ಶೀಲ ಶಂಕಿಸಿ ಹತ್ಯೆ: ಆರೋಪಿ ಪತಿಯ ಬಂಧನ

Webdunia
ಶನಿವಾರ, 27 ಜೂನ್ 2015 (14:55 IST)
ಪತ್ನಿಯನ್ನು ಪತಿಯೇ ಹತ್ಯೆಗೈದು ಕಳೆದು ಹೋಗಿದ್ದಾಳೆ ಹುಡುಕಿಕೊಂಡು ಕೊಡಿ ಎಂದು ದೂರು ದಾಖಲಿಸಿದ್ದ ಆರೋಪಿಯೋರ್ವನನ್ನು ನಗರ ಪೊಲೀಸರು ಇಂದು ಬಂಧಿಸಿದ್ದಾರೆ. 
 
ಬಂಧಿತ ಆರೋಪಿಯನ್ನು ಅಶೋಕ್(35) ಎಂದು ಹೇಳಲಾಗಿದ್ದು, ತನ್ನ ಪತ್ನಿ ಮೀನಾಕ್ಷಿ(30)ಯ ಶೀಲ ಶಂಕಿಸಿ ತಾನೇ ಹತ್ಯೆಗೈದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. 
 
ಏನಿದು ಪ್ರಕರಣ?: 
ದಂಪತಿಗಳಿಬ್ಬರೂ ಚಿಕ್ಕಬಳ್ಳಾಪುರ ಮೂಲದವರಾಗಿದ್ದು, ಇಬ್ಬರೂ ಕೂಡ ನಗರದ ಎಸ್ಟೇಟ್‌ವೊಂದರಲ್ಲಿ ಕೂಲಿ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ನಡುವೆ ಮೀನಾಕ್ಷಿಯ ಚಲನವಲನದ ಬಗ್ಗೆ ಪತಿ ಅಶೋಕ್‌ಗೆ ಅನುಮಾನ ಮೂಡಿದೆ. ಆದ್ದರಿಂದ ಪತ್ನಿಯನ್ನು ತಾನೇ ಹತ್ಯೆಗೈದು ಕಾರ್ಯ ನಿರ್ವಹಿಸುತ್ತಿದ್ದ ತೋಟದಲ್ಲಿಯೇ ಹೂತು ಹಾಕಿದ್ದ ಎನ್ನಲಾಗಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಆಗಾಗ ಕೌಟುಂಬಿಕ ಕಲಹವೂ ನಡೆಯುತ್ತಿತ್ತು ತಿಳಿದು ಬಂದಿದೆ.  
 
ಇನ್ನು ಹತ್ಯೆಗೈದ ಪತಿಯೇ ನಗರದ ಯಲಹಂಕ ಠಾಣೆಗೆ ತರಳಿ ತನ್ನ ಪತ್ನಿ ಕಳೆದು ಹೋಗಿದ್ದಾಳೆ ಹುಡುಕಿಕೊಂಡಿ ಎಂದು ಕಳೆದ ಐದು ದಿನಗಳ ಹಿಂದೆ ದೂರು ದಾಖಲಿಸಿದ್ದ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಮುಂದುವರಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments