ತನ್ನ ಪತ್ನಿಯನ್ನೇ ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದ ಆರೋಪಿಯೋರ್ವನಿಗೆ ಜಿಲ್ಲೆಯ ಮಧುಗಿರಿ ತಾಲೂಕಿನ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ವಾದ-ವಿವಾದವನ್ನು ಆಲಿಸಿದ ನ್ಯಾ. ಬಿ.ಆರ್.ಕಟ್ಟಿಮನಿ ಅವರಿದ್ದ ಏಕ ಸದಸ್ಯ ಪೀಠ ಈ ಆದೇಶವನ್ನು ಹೊರಡಿಸಿದ್ದು, ಶಿಕ್ಷೆಗೊಳಗಾದ ಆರೋಪಿಯನ್ನು ದ್ಯಾಮೇಶ್(30) ಎಂದು ಹೇಳಲಾಗಿದೆ. ಈತ ಜಿಲ್ಲೆಯ ಪಾವಗಡ ತಾಲೂಕಿನ ನ್ಯಾಯದಗುಂಟೆ ನಿವಾಸಿಯಾಗಿದ್ದಾನೆ.
ಪ್ರಕರಣದ ಹಿನ್ನೆಲೆ: ಈತ ತನ್ನ ಪತ್ನಿಯ ಮೇಲೆ ಅನೈತಿಕ ಸಂಬಂಧವನ್ನು ಶಂಕಿಸಿ 2011ರ ಜ.29ರಂದು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದ. ಈ ಹಿನ್ನೆಲೆಯಲ್ಲಿ ಪಾವಗಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.