Webdunia - Bharat's app for daily news and videos

Install App

ಪತ್ನಿ ಮುಂದೆಯೇ ಕುಖ್ಯಾತ ರೌಡಿಶೀಟರ್‍ಗೆ ಚಾಕುವಿನಿಂದ ಇರಿದು ಪರಾರಿ

Webdunia
ಸೋಮವಾರ, 6 ಡಿಸೆಂಬರ್ 2021 (20:35 IST)
ಹಳೆ ದ್ವೇಷದ ನಡುರಸ್ತೆಯಲ್ಲಿ ಪತ್ನಿ ಮುಂದೆಯೇ ಕುಖ್ಯಾತ ರೌಡಿಶೀಟರ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ನಾಲ್ವರು ಆರೋಪಿಗಳನ್ನು ಪುಲಿಕೇಶಿನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ಡಿಜೆ ಹಳ್ಳಿ ಮತ್ತು ಶಿವಾಜಿನಗರದ ಸೈಯದ್ ಮೊಯಿನುದ್ದೀನ್, ಅರ್ಬಾಜ್, ಅದ್ನಾನ್ ಹಾಗೂ ಅರ್ಫಾತ್ ಬಂಧಿತರು. ಆರೋಪಿಗಳಿಂದ ಹಲ್ಲೆಗೊಳಗಾದ ಶಿವಾಜಿನಗರದ ರೌಡಿಶೀಟರ್ ಮನ್ಸೂರ್ ಅಲಿಯಾಸ್ ದೂನ್ ಗಂಭೀರವಾಗಿ ಗಾಯಗೊಂಡಿದ್ದಾನೆ, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೆÇಲೀಸರು ಆಸ್ಪತ್ರೆಯಲ್ಲಿದ್ದಾರೆ. 
ಹಲ್ಲೆಗೊಳಗಾಗಿರುವ ರೌಡಿಶೀಟರ್ ಮನ್ಸೂರ್ ವಿರುದ್ಧ ನಾನಾ ಪೆÇಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹೆಣ್ಣೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಜೈಲು ಸೇರಿ ಶಿಕ್ಷೆ ಅನುಭವಿಸಿ ಹೊರಬಂದಿದ್ದ. ರಂಜಾನ್ ಹಬ್ಬದ ವೇಳೆ ಮನ್ಸೂರ್ ಬಂಧಿತ ಆರೋಪಿ ಮೊಯಿನುದ್ದೀನ್ ಮೇಲೆ ಹಲ್ಲೆ ನಡೆಸಿದ್ದ. ಇದನ್ನೇ ಮನಸ್ಸಿನಲ್ಲಿಟ್ಟುಕೊಂಡು ಮೊಯಿನುದ್ದೀನ್ ದ್ವೇಷ ಸಾಧಿಸುತ್ತಿದ್ದ. 
ನ.27ರಂದು ಮನ್ಸೂರ್ ತನ್ನ ಬೈಕ್ ಅನ್ನು ಸರ್ವೀಸ್ ಮಾಡಿಸಲು ಶಿವಾಜಿನಗರದ ಗ್ಯಾರೇಜ್‍ಗೆ ಬಿಟ್ಟಿದ್ದ. ಇದೇ ಗ್ಯಾರೇಜ್‍ನಲ್ಲಿ ಮೊಯಿನುದ್ದೀನ್ ಕೆಲಸ ಮಾಡುತ್ತಿದ್ದ. ಮನ್ಸೂರ್ ಗ್ಯಾರೇಜ್‍ಗೆ ಬಂದಾಗಿನಿಂದ ಹೋಗುವವರೆಗೂ ಅವನನ್ನೇ ಗಮನಿಸಿ, ಮೊಯಿನುದ್ದೀನ್ ತನ್ನ ಸಹಚರರ ಜತೆ ಸೇರಿ ಕೊಲೆ ಮಾಡಲು ಸಂಚು ರೂಪಿಸಿದ್ದ. ಮನ್ಸೂರ್ ತನ್ನ ಪತ್ನಿಯ ಜತೆ ಬೈಕ್‍ನಲ್ಲಿ ಹೋಗುವುದನ್ನೇ ಕಾದು ಪತ್ನಿಯ ಎದುರಿಗೆ ಮನ್ಸೂರ್‍ಗೆ ಚಾಕುವಿನಿಂದ ಇರಿದು ಆರೋಪಿಗಳು ಪರಾರಿಯಾಗಿದ್ದರು.
 ಸ್ಥಳೀಯರ ಸಹಾಯದಿಂದ ಪತ್ನಿ ಪತಿಯನ್ನು ಆಸ್ಪತ್ರೆಗೆ ಸೇರಿಸಿದ ಬಳಿಕ ಪುಲಿಕೇಶಿನಗರ ಪೆÇಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದ ಪೆÇಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments