Webdunia - Bharat's app for daily news and videos

Install App

ಪತ್ನಿ ಸಾವು, ಪತಿಯೇ ಕೊಲೆಗೈದಿರೋ ಶಂಕೆ

Webdunia
ಶನಿವಾರ, 12 ಆಗಸ್ಟ್ 2023 (14:51 IST)
ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ದರ್ಶಿನಿ ಮೃತ ದುರ್ದೈವಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪತಿ ಹೇಳಿದ್ದಾನೆ. ಕೆ.ಆರ್.ಆಸ್ಪತ್ರೆಗೆ ಪತ್ನಿ ತಂದು ಸೇರಿಸಿ ಮನೆಯವರಿಗೆ ವಿಷಯ ತಿಳಿಸಿದ್ದಾನೆ. ಗಂಡ ಸೂರ್ಯನೇ ಕೊಲೆ ಮಾಡಿರುವುದಾಗಿ ದರ್ಶಿನಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಒಂದೂವರೆ ವರ್ಷದ ಹಿಂದೆ ಬೆಳಗೊಳ ಗ್ರಾಮದ ಸೂರ್ಯ ಎಂಬುವರ ಜೊತೆ ವಿವಾಹವಾಗಿತ್ತು. ಪ್ರೀತಿಸಿ ಮದುವೆಯಾಗಿದ್ದ ದರ್ಶಿನಿ ಮತ್ತು ಸೂರ್ಯ ಇಬ್ಬರು ಪ್ರೀತಿಸಿ ಮದುವೆಯಾಗಿದ್ರು. ಸೂರ್ಯ ಮದುವೆಯಾದ 4 ತಿಂಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ. ವರದಕ್ಷಿಣೆ
ತರುವಂತೆ ಮಗಳನ್ನ ಹಿಂಸಿಸುತ್ತಿದ್ದ. ನನ್ನ ಮಗಳನ್ನ ಕೊಲೆ ಮಾಡಿ ನಮ್ಮ ಮೇಲು ಹಲ್ಲೆ ಮಾಡಿದ್ದಾನೆ.
 
ಬದುಕಿ ಬಾಳಬೇಕಿದ್ದ ನನ್ನ ಮಗಳ ಜೀವನ ಕೊಲೆಯಲ್ಲಿ ಅಂತ್ಯವಾಗಿದೆ. ನನ್ನ ಮಗಳ ಸಾವಿಗೆ ನ್ಯಾಯ ಬೇಕು.
ಸೂರ್ಯ ಮತ್ತು ಆತನ ಕುಟುಂಬಸ್ಥರನ್ನ ಬಂಧಿಸಬೇಕು ಎಂದು ಮೃತ ಗೃಹಿಣಿ ತಾಯಿ ಆಗ್ರಹಿಸಿದ್ದಾರೆ. ದರ್ಶಿನಿ ಕುಟುಂಬಸ್ಥರು ಘಟನೆ ಸಂಬಂಧ ಕೆ.ಆರ್.ಎಸ್ ಠಾಣೆಗೆ ಪತಿ ಹಾಗೂ ಮನೆಯವರ ವಿರುದ್ಧ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments