Webdunia - Bharat's app for daily news and videos

Install App

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೆ ಯತ್ನಿಸಿದ ಪತ್ನಿ! ಮುಂದೇನಾಯ್ತು?

Webdunia
ಭಾನುವಾರ, 21 ನವೆಂಬರ್ 2021 (15:09 IST)
ಯಾದಗಿರಿ : ಪ್ರಿಯಕರನ ಜೊತೆ ಸೇರಿ ಹೆಂಡತಿ ಗಂಡನನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೂವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನವೆಂಬರ್ 18ರ ಮಧ್ಯರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹೂವಿನಹಳ್ಳಿಯಲ್ಲಿ ಚಂದ್ರಕಲಾ ಎಂಬ ಮಹಿಳೆ ಪ್ರಿಯತಮ ಬಸನಗೌಡ ಜೊತೆ ಸೇರಿ ತನ್ನ ಗಂಡ ವಿಶ್ವನಾಥರೆಡ್ಡಿ ನಿದ್ದೆ ಮಾತ್ರೆ ಕೊಟ್ಟು ಕೊಲೆಗೆ ಯತ್ನಿಸಿದ್ದಾಳೆ. ಮೈದುನನ ಜೊತೆ ಇರುವ ಅನೈತಿಕ ಸಂಬಂಧ ಮುಚ್ಚಿ ಹಾಕಲು ಗಂಡನಿಗೆ ದೇವರ ಪ್ರಸಾದವೆಂದು ನೀರಿನಲ್ಲಿ ನಿದ್ದೆ ಮಾತ್ರೆ ಪುಡಿ ಹಾಕಿ ಮಲಗಿದ ಮೇಲೆ ಗಂಡನ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದಾಳೆ. ಈ ವೇಳೆ ವಿಶ್ವನಾಥರೆಡ್ಡಿ ಎಚ್ಚರಗೊಂಡು ಮೇಲೆದ್ದಿದ್ದಾರೆ. ಬಳಿಕ ವಿಶ್ವನಾಥರೆಡ್ಡಿ ಬಸನಗೌಡ, ಚಂದ್ರಕಲಾಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ.
ಇನ್ನು ಚಂದ್ರಕಲಾ ಹಾಗೂ ಪ್ರಿಯತಮ ಬಸನಗೌಡ ವಿಶ್ವನಾಥರೆಡ್ಡಿ ಹತ್ಯೆಗೆ ಪ್ಲ್ಯಾನ್ ಮಾಡಿದ್ದ ಬಗ್ಗೆ ಮಾತಾಡಿರುವ ಆಡಿಯೋ ಸಿಕ್ಕಿದ್ದು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ವಿಶ್ವನಾಥರೆಡ್ಡಿ ಪತ್ನಿ ಚಂದ್ರಕಲಾ, ಪ್ರಿಯತಮ ಬಸನಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments