ರಾಡ್‌ನಿಂದ ಪತಿ ಹತ್ಯೆಗೈದ ಪತ್ನಿ!

Webdunia
ಭಾನುವಾರ, 7 ನವೆಂಬರ್ 2021 (12:12 IST)
ಬೆಂಗಳೂರು : ರಾಡ್‌ನಿಂದ ಪತಿ ಹತ್ಯೆಗೈದು 2ನೇ ಪತ್ನಿ ಠಾಣೆಯಲ್ಲಿ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಸ್ವಾಮಿರಾಜ್(46) ಹತ್ಯೆಯಾದ ವ್ಯಕ್ತಿ.
ನೇತ್ರಾ (35) ಗಂಡನನ್ನ ಕೊಲೆಗೈದು ಮಾದನಾಯಕನಹಳ್ಳಿ ಠಾಣೆಗೆ ಶರಣಾದ ಪತ್ನಿ.
ಬೆಂಗಳೂರು ಉತ್ತರ ತಾಲೂಕಿನ ಹಾರೋಕ್ಯಾತನಹಳ್ಳಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸ್ವಾಮಿರಾಜ್ನನ್ನು ಆತನ 2ನೇ ಪತ್ನಿ ನೇತ್ರಾ ರಾಡ್‌ನಿಂದ ಹತ್ಯೆಗೈದು ಮಾದನಾಯಕನಹಳ್ಳಿ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾಳೆ. ನನ್ನ ಪತಿ ಸ್ವಾಮಿರಾಜ್, ಹತ್ತಿರದ ಸಂಬಂಧಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಹಿಂಸೆ ನೀಡುತ್ತಿದ್ದ. ಈ ಹಿನ್ನೆಲೆ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿದ್ದೇನೆ ಎಂದು ಮೃತ ಸ್ವಾಮಿರಾಜ್ನ 2ನೇ ಪತ್ನಿ ನೇತ್ರಾ ಪೊಲೀಸರೆದರು ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಕಳೆದ 10 ವರ್ಷದಿಂದ ನೇತ್ರಾ ಮತ್ತು ಸ್ವಾಮಿರಾಜ್ ಜೊತೆಯಾಗಿ ಜೀವನ ಸಾಗಿಸ್ತಿದ್ದರು. 2 ವರ್ಷದ ಹಿಂದೆ ಇಬ್ರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಇನ್ನು ಈ ಘಟನೆ ಸಂಬಂಧ ಮೃತ ಸ್ವಾಮಿರಾಜ್ನ ಮೊದಲ ಪತ್ನಿ 2ನೇ ಪತ್ನಿಯ ವಿರುದ್ಧ ದೂರು ದಾಖಲಿಸಿದ್ದಾಳೆ. ಸ್ವಾಮಿರಾಜ್ ಆಸ್ತಿಗಾಗಿ ಕೊಲೆ ಮಾಡಿದ್ದಾರೆಂದು ಆರೋಪಿಸಿ ಮೃತ ಸ್ವಾಮಿರಾಜ್ ಮೊದಲ ಪತ್ನಿ ಸತ್ಯಕುಮಾರಿ ಮಾದನಾಯಕನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ