Select Your Language

Notifications

webdunia
webdunia
webdunia
webdunia

ಜಾನುವಾರು, ವ್ಯಕ್ತಿ ಮೇಲೆ ಕಾಡಾನೆ ದಾಳಿ

ಜಾನುವಾರು, ವ್ಯಕ್ತಿ ಮೇಲೆ ಕಾಡಾನೆ ದಾಳಿ
ರಾಮನಗರ , ಗುರುವಾರ, 16 ಫೆಬ್ರವರಿ 2023 (13:24 IST)
ಕಾಡಾನೆಯೊಂದು ದಾಳಿ ಮಾಡಿದ್ದು, ಜಾನುವಾರು ಸಾವಿಗೀಡಾಗಿ, ವ್ಯಕ್ತಿಯೊಬ್ಬನನ್ನ ಗಂಭೀರವಾಗಿ ಗಾಯಗೊಳಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ‌ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗಾಯಾಳು ಗೋಪಾಲ್​ರನ್ನು, ಚನ್ನಪಟ್ಟಣ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ಮಾಡುವಾಗ ಮನೆ ಮಾಲೀಕ ಗೋಪಾಲ್ ಹೊರಗಡೆ ಹೋಗಿದ್ದಾರೆ. ಈ ವೇಳೆ ಕಾಡಾನೆ ಗೋಪಾಲ್ ಮೇಲೆ ದಾಳಿ ನಡೆಸಿದ್ದು, ಗೋಪಾಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾವಿನ ಸಂಖ್ಯೆ 41 ಸಾವಿರಕ್ಕೆ ಏರಿಕೆ