ಎಸ್‌ಸಿ,ಎಸ್‌ಟಿ ಸಮುದಾಯಗಳಿಗೆ ಶೇ.70 ರಷ್ಟು ಮೀಸಲಾತಿ: ಸಿಎಂ

Webdunia
ಗುರುವಾರ, 5 ಅಕ್ಟೋಬರ್ 2017 (18:39 IST)
ಶಿಕ್ಷಣ ಮತ್ತು ಸಾರ್ವಜನಿಕ ಕ್ಷೇತ್ರದ ಸೇವೆಗಳಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳಿಗೆ 70ರಷ್ಟು ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
ತಮಿಳುನಾಡು ಸರಕಾರ ಜಾರಿಗೆ ತಂದ ಮಾದರಿಯಲ್ಲಿ ರಾಜ್ಯದಲ್ಲೂ ಮೀಸಲಾತಿ ತರಲು ಸರಕಾರ ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ.
 
ಅವರು ವಿಧಾನಸೌಧದಲ್ಲಿ ಆಯೋಜಿಸಲಾದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿದ್ದರು. ಆದರೆ, ವರುಣನ ಅಬ್ಬರ ಕಾರ್ಯಕ್ರಮಕ್ಕೆ ಅಡ್ಡಿಯಾಯಿತು. 
 
ಮೀಸಲಾತಿಯು ಶೇ. 50 ಕ್ಕಿಂತ ಹೆಚ್ಚಾಗಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಆದರೆ, ತಮಿಳುನಾಡು ಸರಕಾರ ಹಿಂದುಳಿದ ಸಮುದಾಯಗಳಿಗೆ ಶೇ.69 ರಷ್ಟು ಮೀಸಲಾತಿ ನಿಗದಿಪಡಿಸಿದೆ ಎಂದು ತಿಳಿಸಿದ್ದಾರೆ. 
 
ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳು ಸಾಕಷ್ಟು ಪ್ರಾತಿನಿಧ್ಯ ಹೊಂದಿಲ್ಲವಾದ್ದರಿಂದ, ಸರಕಾರ ಮೀಸಲಾತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ಮಾಹಿತಿ ನೀಡಿದ್ದಾರೆ.
 
ನಾನು ಎಸ್‌ಸಿ ಎಸ್‌ಟಿ ಮತಗಳನ್ನು ಸೆಳೆಯಲು ಮೀಸಲಾತಿ ಹೆಚ್ಚಿಸುವ ಪ್ರಯತ್ನ ಮಾಡುತ್ತಿಲ್ಲ. ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ನೀಡುವುದಕ್ಕಾಗಿ ನಾನು ಇದನ್ನು ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments