Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗ್ತಾರಾ..? : ಕೋಡಿಮಠ ಶ್ರೀ ಭವಿಷ್ಯ ಏನೇಳುತ್ತೆ

ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗ್ತಾರಾ..? : ಕೋಡಿಮಠ ಶ್ರೀ ಭವಿಷ್ಯ ಏನೇಳುತ್ತೆ
ದಾವಣಗೆರೆ , ಶುಕ್ರವಾರ, 15 ಸೆಪ್ಟಂಬರ್ 2023 (08:04 IST)
ದಾವಣಗೆರೆ : ಲೋಕಸಭಾ ಚುನಾವಣೆ ಸಮೀಪಿಸಲಿ. ಮೋದಿ ಅವರು ಮತ್ತೆ ಪ್ರಧಾನಿ ಆಗುತ್ತಾರಾ ಅಥವಾ ಇಲ್ಲವಾ ಎಂಬ ಬಗ್ಗೆ ಅವತ್ತೇ ಹೇಳುವೆ ಎಂದು ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆಯ ಹೊನ್ನಾಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಬಳಿಕ ಒಂದು ಪಕ್ಷ ಆಡಳಿತ ನಡೆಸುತ್ತದೆ ಎಂದು ಹೇಳಿದ್ದೆ. ನಾನು ಹೇಳಿದಂತೆಯೇ ಆಗಿದೆ. ಅದರಂತೆ ಅವಘಡಗಳಿದ್ದಾವೆ. ಅ ಅವಘಡಗಳು ಕಳೆಯಬೇಕು. ಅ ಬಳಿಕ ಮುಂದಿನ ಭವಿಷ್ಯ ಹೇಳುವೆ ಎಂದು ತಿಳಿಸಿದ್ದಾರೆ. 

ಗುರುಗಳಲ್ಲಿ ಸಮಾಜಕಾರಕ ಹಾಗೂ ಮೋಕ್ಷಕಾರಕ ಗುರುಗಳಿದ್ದಾರೆ. ಜಾತಿಗಳು ಮನೆಯಲ್ಲಿರಬೇಕು. ಧರ್ಮ ಹೊರಗಡೆ ಇರಬೇಕು. ಆಗ ಶಾಂತಿ ಇರುತ್ತದೆ. ಮನುಷ್ಯನಿಗೆ ಯಾವುದು ಶಾಂತಿ, ನೆಮ್ಮದಿ ನೀಡುತ್ತದೆಯೋ ಅದು ಧರ್ಮವಾಗುತ್ತದೆ. ನೀರಿನ ಮೇಲೆ ದೋಣಿ ಇರಬೇಕೇ ಹೊರತು ದೋಣಿಯೊಳಗೆ ನೀರು ಬಂದರೆ ಆಪಾಯ ತಪ್ಪದು ಎಂದು ಸೂಚ್ಯವಾಗಿ ಹೇಳಿದ್ದಾರೆ.

ಕಾರ್ತಿಕ ಮಾಸ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ. ರಾಜ್ಯ-ರಾಷ್ಟ್ರದಲ್ಲಿ ನಡೆಯುವ ಅವಘಡಗಳಿಂದ ಪಾರು ಮಾಡಿದರೆ ಮುಂದಿನ ಭವಿಷ್ಯ ಹೇಳುವೆ ಎಂದು ಮಾತನಾಡಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ದೇವಸ್ಥಾನಗಳ ಬಳಿ ತಂಬಾಕು ಉತ್ಪನ್ನ ಮಾರಾಟ ನಿಷೇಧ