Webdunia - Bharat's app for daily news and videos

Install App

ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗ್ತಾರಾ..? : ಕೋಡಿಮಠ ಶ್ರೀ ಭವಿಷ್ಯ ಏನೇಳುತ್ತೆ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (08:04 IST)
ದಾವಣಗೆರೆ : ಲೋಕಸಭಾ ಚುನಾವಣೆ ಸಮೀಪಿಸಲಿ. ಮೋದಿ ಅವರು ಮತ್ತೆ ಪ್ರಧಾನಿ ಆಗುತ್ತಾರಾ ಅಥವಾ ಇಲ್ಲವಾ ಎಂಬ ಬಗ್ಗೆ ಅವತ್ತೇ ಹೇಳುವೆ ಎಂದು ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

ದಾವಣಗೆರೆಯ ಹೊನ್ನಾಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಬಳಿಕ ಒಂದು ಪಕ್ಷ ಆಡಳಿತ ನಡೆಸುತ್ತದೆ ಎಂದು ಹೇಳಿದ್ದೆ. ನಾನು ಹೇಳಿದಂತೆಯೇ ಆಗಿದೆ. ಅದರಂತೆ ಅವಘಡಗಳಿದ್ದಾವೆ. ಅ ಅವಘಡಗಳು ಕಳೆಯಬೇಕು. ಅ ಬಳಿಕ ಮುಂದಿನ ಭವಿಷ್ಯ ಹೇಳುವೆ ಎಂದು ತಿಳಿಸಿದ್ದಾರೆ. 

ಗುರುಗಳಲ್ಲಿ ಸಮಾಜಕಾರಕ ಹಾಗೂ ಮೋಕ್ಷಕಾರಕ ಗುರುಗಳಿದ್ದಾರೆ. ಜಾತಿಗಳು ಮನೆಯಲ್ಲಿರಬೇಕು. ಧರ್ಮ ಹೊರಗಡೆ ಇರಬೇಕು. ಆಗ ಶಾಂತಿ ಇರುತ್ತದೆ. ಮನುಷ್ಯನಿಗೆ ಯಾವುದು ಶಾಂತಿ, ನೆಮ್ಮದಿ ನೀಡುತ್ತದೆಯೋ ಅದು ಧರ್ಮವಾಗುತ್ತದೆ. ನೀರಿನ ಮೇಲೆ ದೋಣಿ ಇರಬೇಕೇ ಹೊರತು ದೋಣಿಯೊಳಗೆ ನೀರು ಬಂದರೆ ಆಪಾಯ ತಪ್ಪದು ಎಂದು ಸೂಚ್ಯವಾಗಿ ಹೇಳಿದ್ದಾರೆ.

ಕಾರ್ತಿಕ ಮಾಸ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ. ರಾಜ್ಯ-ರಾಷ್ಟ್ರದಲ್ಲಿ ನಡೆಯುವ ಅವಘಡಗಳಿಂದ ಪಾರು ಮಾಡಿದರೆ ಮುಂದಿನ ಭವಿಷ್ಯ ಹೇಳುವೆ ಎಂದು ಮಾತನಾಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments