ಬೆನ್ನಿಗೆ ನಿಂತವರಿಗೆ ದ್ರೋಹ ಮಾಡಲ್ಲ, ನಾಮಪತ್ರ ವಾಪಸ್ ಪಡೆಯುವುದಿಲ್ಲ: ಕೆ ಎಸ್‌ ಈಶ್ವರಪ್ಪ

Sampriya
ಭಾನುವಾರ, 14 ಏಪ್ರಿಲ್ 2024 (12:26 IST)
ಶಿವಮೊಗ್ಗ: ನನ್ನ ಬೆನ್ನಿಗೆ ನಿಂತವರಿಗೆ ನಾನು ಯಾವತ್ತೂ ದ್ರೋಹ ಬಗೆಯುವುದಿಲ್ಲ. ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಬಿಜೆಪಿ ಬಂಡಾಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಹೇಳಿದರು.

ಈ ಮೂಲಕ ಬಿಜೆಪಿ ಬಂಡಾಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ನಾಮಪತ್ರ ಹಿಂಪಡೆಯುತ್ತಾರೆಂಬ ವದಂತಿಗಳಿಗೆ ಸ್ಪಷ್ಟನೆ ನೀಡಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಶುಕ್ರವಾರ ನಾಮಪತ್ರ ಸಲ್ಲಿಸಿದ್ದು ಬಿಜೆಪಿಯ ಹಾಲಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಹಿರಿಯ ಪುತ್ರ ಬಿ ವೈ ರಾಘವೇಂದ್ರ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ವಿರುದ್ಧ ಕಣಕ್ಕಿಳಿದಿದ್ದಾರೆ.

ಪುತ್ರ ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್‌ ನೀಡದ್ದರಿಂದ ಕೋಪಗೊಂಡಿದ್ದ ಈಶ್ವರಪ್ಪ ಅವರು ಬಿಜೆಪಿ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ವೈ ಬಿ ವಿಜಯೇಂದ್ರ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

ಈ ನಡುವೆ ಅಮಿತ್ ಶಾ ಅವರು ಕರೆ ಮಾಡಿ ಈಶ್ವರಪ್ಪ ಬಳಿ ಮಾತುಕತೆ ನಡೆಸಿ, ಮಾತುಕತೆಗೆ ದೆಹಲಿ ಕರೆಸಿಕೊಂಡಿದ್ದರು. ಆದರೆ ಶಾ ಅವರು ಭೇಟಿಗೆ ಅವಕಾಶ ನೀಡದೆ ನನ್ನ ಸ್ಪರ್ಧೆಗೆ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆಂದು ಈಶ್ವರಪ್ಪ ಹೇಳಿದ್ದರು. ಇನ್ನೂ ಯಾವುದೇ ಕಾರಣಕ್ಕೂ ಕಣದಿಂದ  ವಾಪಾಸ್ಸಾಗುವುದಿಲ್ಲ ಎಂದಿದ್ದರು.

ಅವರು ಇನ್ನೂ ಕಾಲ ಮಿಂಚಿಲ್ಲ ನೀವು ಮತ್ತೇ ವಾಪಾಸ್ ನಮ್ಮ ಜತೆ ಬನ್ನಿ ಈಶ್ವರಪ್ಪನವರೇ. ನಿಮ್ಮ ಅವಶ್ಯಕತೆ ನಮಗಿದೆ ಎಂದು ವಿಜಯೇಂದ್ರ  ಹೇಳಿದ್ದರು.

ಆದರೆ ಈಶ್ವರಪ್ಪ ಅವರು ಈಚೆಗೆ ನಾಮಪತ್ರ ಸಲ್ಲಿಸಿದ್ದರು. ಇದೀಗ ರಾಜಕೀಯ ವಲಯದಲ್ಲಿ ನಾಮಪತ್ರ ವಾಪಸ್ ಪಡೆಯಲಿದ್ದಾರೆಂಬ ಸುದ್ದಿಗೆ ಈಶ್ವರಪ್ಪ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಕಣದಿಂದ ವಾಪಾಸ್ಸಾಗುವ ಮಾತೇ ಇಲ್ಲ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಈಶ್ವರಪ್ಪ ಅವರು, ಪ್ರಧಾನಿ ಮೋದಿ ಅವರನ್ನು ಬಲಗೊಳಿಸುವುದು ನನ್ನ ಗುರಿಯಾಗಿದೆ. ನಾನು ನಾಮಪತ್ರ ಹಿಂಪಡೆಯುತ್ತೇನೆ ಎಂದು ಕೆಲವರು ವದಂತಿ ಹಬ್ಬಿಸುತ್ತಿದ್ದಾರೆ, ನನ್ನ ಬೆನ್ನಿಗೆ ನಿಂತವರಿಗೆ ನಾನು ಯಾವತ್ತೂ ದ್ರೋಹ ಬಗೆಯುವುದಿಲ್ಲ. ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments