Publish Date: Thu, 21 Mar 2024 (11:10 IST)
Updated Date: Thu, 21 Mar 2024 (11:14 IST)
ಬೆಂಗಳೂರು: ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ನೋವಿದೆ. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಬಿಜೆಪಿ ಸಂಸದ ಸದಾನಂದ ಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಕಾಂಗ್ರೆಸ್ನಿಂದ ಆಫರ್ ಬಂದಿರೋದು ನಿಜ. ಆದರೆ ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುವುದಿಲ್ಲ ಎಂದರು.
ಈಚೆಗೆ ಬಿಜೆಪಿ ಬೆಂಗಳೂರು ಉತ್ತರದಿಂದ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತಪಡಿಸಿದ್ದರು. ಅದಲ್ಲದೆ ಕಾಂಗ್ರೆಸ್ಗೆ ಸೇರ್ಪಡೆಗೊಳ್ಳಲಿದ್ದಾರೆಂಬ ಸುದ್ದಿ ಕಳೆದೆರಡು ದಿನಗಳಲ್ಲಿ ಜೋರಾಗಿತ್ತು.
ಇದೀಗ ಈ ಎಲ್ಲ ಗೊಂದಲ್ಲಕ್ಕೆ ಡಿವಿ ಸದಾನಂದ ಗೌಡ ಅವರು ಪ್ರತಿಕ್ರಿಯಿಸಿದ್ದಾರೆ. ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಎನ್ಡಿಎ ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ.