Select Your Language

Notifications

webdunia
webdunia
webdunia
webdunia

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಪರಸ್ಪರ ಭೇಟಿಯಾಗಲು ಅವಕಾಶ ಸಿಗುತ್ತಾ

Darshan-Prajwal Revanna

Krishnaveni K

ಬೆಂಗಳೂರು , ಮಂಗಳವಾರ, 25 ಜೂನ್ 2024 (10:44 IST)
Photo Credit: Instagram
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಇಬ್ಬರೂ ಒಂದೇ ಜೈಲಿನಲ್ಲಿರುವುದು ವಿಶೇಷ. ಪ್ರಜ್ವಲ್ ನನ್ನ ಸ್ನೇಹಿತ ಎಂದು ಈ ಮೊದಲು ದರ್ಶನ್ ಹೇಳಿದ್ದರು. ಇದೀಗ ಇಬ್ಬರೂ ಬೇರೆ ಬೇರೆ ಪ್ರಕರಣದಲ್ಲಿ ಜೈಲು ಕಂಬಿ ಎಣಿಸುವಂತಾಗಿದೆ. ಇಬ್ಬರ ಮೇಲೂ ಗಂಭೀರ ಆರೋಪಗಳಿವೆ. ಇಬ್ಬರೂ ಪರಸ್ಪರ ಭೇಟಿಗೆ ಅವಕಾಶವಿರುತ್ತದಾ ಎಂಬ ಕುತೂಹಲ ಕೆಲವರಲ್ಲಿರಬಹುದು.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್ ರನ್ನು ಎಸ್ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ಬಳಿಕ ಈಗ ಮತ್ತೆ ಪ್ರಜ್ವಲ್ ರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಹೀಗಾಗಿ ಪ್ರಜ್ವಲ್ ಮತ್ತೆ ನಿನ್ನೆಯಿಂದ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ರನ್ನು ಶನಿವಾರ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು ಅವರನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ. ಆದರೆ ಭದ್ರತೆ ದೃಷ್ಟಿಯಿಂದ ದರ್ಶನ್ ರನ್ನು ಇತರೆ ಕೈದಿಗಳು ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ. ಹೀಗಾಗಿ ಪ್ರಜ್ವಲ್ ಮತ್ತು ದರ್ಶನ್ ಒಂದೇ ಜೈಲಿನಲ್ಲಿದ್ದರೂ ಭೇಟಿಗೆ ಬಿಲ್ ಕುಲ್ ಅವಕಾಶವಿರಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಯುವಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಸೂರಜ್ ರೇವಣ್ಣ ಮೆಡಿಕಲ್ ಟೆಸ್ಟ್ ಇಂದು