Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರು?

Webdunia
ಭಾನುವಾರ, 26 ಮೇ 2019 (16:27 IST)
ರಾಜ್ಯದಲ್ಲಿ ಶುರುವಾಯಿತಾ ಮತ್ತೆ ರೆಸಾರ್ಟ್ ರಾಜಕಾರಣ? ಎನ್ನುವ ಸನ್ನಿವೇಶ ನಿರ್ಮಾಣವಾಗಿದೆ.

ಮೈತ್ರಿ ನಾಯಕರ ಕೈಗೆ ಸಿಗದೇ ಗೋವಾಗೆ ಕೈ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಜತೆಗೆ ಕೆಲವು ಶಾಸಕರು ಹೋಗಿರೋ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ದೋಸ್ತಿಗಳ ಫ್ಲಾನ್ ನಡೆಯುತ್ತಿದೆ. ಸಿಡಿದೆದ್ದ ಶಾಸಕರ ಮನವೊಲಿಕೆಗೆ ಪ್ರಯತ್ನ ಮುಂದುವರಿದಿದೆ.

ಸಚಿವ ಸ್ಥಾನ ನೀಡಿ ಅಸಮಾಧಾನ ತಣಿಸುವ ಪ್ರಯತ್ನ ಮಾಡಲಾಗುತ್ತಿದೆ. ಜೂನ್ ಮೊದಲ ವಾರದಲ್ಲಿ ಸಂಪುಟ ಪುನಾಃರಚನೆ? ಆಗುವ ಸಾಧ್ಯತೆ ಕೇಳಿಬರುತ್ತಿದೆ. ಕೆಲವು ಹಾಲಿ ಸಚಿವರಿಗೆ ಕೊಕ್ ಸಾಧ್ಯತೆಇದೆ. ಪುಟ್ಟರಂಗ ಶೆಟ್ಟಿ, ವೆಂಕಟರಮಣಪ್ಪ, ಜಯಮಾಲಾ, ಕೃಷ್ಣಭೈರೇಗೌಡ, ಎಂ.ಸಿ.ಮನಗೂಳಿ, ಶ್ರೀನಿವಾಸ್, ಸಾ.ರಾ.ಮಹೇಶ್, ಡಿ.ಸಿ.ತಮ್ಮಣ್ಣ ಕೈಬಿಡುವ ಸಾಧ್ಯತೆ ಕಂಡುಬರುತ್ತಿದೆ.

ಇವರ ಸ್ಥಾನಗಳನ್ನ ಅತೃಪ್ತರಿಗೆ ನೀಡಲು ಚಿಂತನೆ ನಡೆಯುತ್ತಿದೆ. ರಮೇಶ್, ನಾಗೇಂದ್ರ, ಭೀಮಾನಾಯ್ಕ, ಭದ್ರಾವತಿ ಸಂಗಮೇಶ್, ರಾಜಾ ವೆಂಕಟಪ್ಪ ನಾಯ್ಕ, ಅಖಂಡ ಶ್ರೀನಿವಾಸ್ ಮೂರ್ತಿಗೆ ನೀಡಲು ಚಿಂತನೆ ನಡೆಯುತ್ತಿದೆ.

ಈ ನಡುವೆ ಅಸಮಾಧಾನಗೊಂಡಿರುವ ಹೊರಟ್ಟಿಗೂ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿದೆ. ಹೆಚ್.ಕೆ.ಕುಮಾರಸ್ವಾಮಿ,ಅನ್ನದಾನಿಗೂ ಸಚಿವ ಸ್ಥಾನದ ಭಾಗ್ಯ ಸಿಗುತ್ತಾ ಎನ್ನುವ ಪ್ರಶ್ನೆ ಕೇಳಿಬರಲಾರಂಭಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments