ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ಶುರು?

Webdunia
ಭಾನುವಾರ, 26 ಮೇ 2019 (16:27 IST)
ರಾಜ್ಯದಲ್ಲಿ ಶುರುವಾಯಿತಾ ಮತ್ತೆ ರೆಸಾರ್ಟ್ ರಾಜಕಾರಣ? ಎನ್ನುವ ಸನ್ನಿವೇಶ ನಿರ್ಮಾಣವಾಗಿದೆ.

ಮೈತ್ರಿ ನಾಯಕರ ಕೈಗೆ ಸಿಗದೇ ಗೋವಾಗೆ ಕೈ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಜತೆಗೆ ಕೆಲವು ಶಾಸಕರು ಹೋಗಿರೋ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ.

ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ದೋಸ್ತಿಗಳ ಫ್ಲಾನ್ ನಡೆಯುತ್ತಿದೆ. ಸಿಡಿದೆದ್ದ ಶಾಸಕರ ಮನವೊಲಿಕೆಗೆ ಪ್ರಯತ್ನ ಮುಂದುವರಿದಿದೆ.

ಸಚಿವ ಸ್ಥಾನ ನೀಡಿ ಅಸಮಾಧಾನ ತಣಿಸುವ ಪ್ರಯತ್ನ ಮಾಡಲಾಗುತ್ತಿದೆ. ಜೂನ್ ಮೊದಲ ವಾರದಲ್ಲಿ ಸಂಪುಟ ಪುನಾಃರಚನೆ? ಆಗುವ ಸಾಧ್ಯತೆ ಕೇಳಿಬರುತ್ತಿದೆ. ಕೆಲವು ಹಾಲಿ ಸಚಿವರಿಗೆ ಕೊಕ್ ಸಾಧ್ಯತೆಇದೆ. ಪುಟ್ಟರಂಗ ಶೆಟ್ಟಿ, ವೆಂಕಟರಮಣಪ್ಪ, ಜಯಮಾಲಾ, ಕೃಷ್ಣಭೈರೇಗೌಡ, ಎಂ.ಸಿ.ಮನಗೂಳಿ, ಶ್ರೀನಿವಾಸ್, ಸಾ.ರಾ.ಮಹೇಶ್, ಡಿ.ಸಿ.ತಮ್ಮಣ್ಣ ಕೈಬಿಡುವ ಸಾಧ್ಯತೆ ಕಂಡುಬರುತ್ತಿದೆ.

ಇವರ ಸ್ಥಾನಗಳನ್ನ ಅತೃಪ್ತರಿಗೆ ನೀಡಲು ಚಿಂತನೆ ನಡೆಯುತ್ತಿದೆ. ರಮೇಶ್, ನಾಗೇಂದ್ರ, ಭೀಮಾನಾಯ್ಕ, ಭದ್ರಾವತಿ ಸಂಗಮೇಶ್, ರಾಜಾ ವೆಂಕಟಪ್ಪ ನಾಯ್ಕ, ಅಖಂಡ ಶ್ರೀನಿವಾಸ್ ಮೂರ್ತಿಗೆ ನೀಡಲು ಚಿಂತನೆ ನಡೆಯುತ್ತಿದೆ.

ಈ ನಡುವೆ ಅಸಮಾಧಾನಗೊಂಡಿರುವ ಹೊರಟ್ಟಿಗೂ ಸಚಿವ ಸ್ಥಾನ ಸಿಗಲಿದೆ ಎನ್ನಲಾಗುತ್ತಿದೆ. ಹೆಚ್.ಕೆ.ಕುಮಾರಸ್ವಾಮಿ,ಅನ್ನದಾನಿಗೂ ಸಚಿವ ಸ್ಥಾನದ ಭಾಗ್ಯ ಸಿಗುತ್ತಾ ಎನ್ನುವ ಪ್ರಶ್ನೆ ಕೇಳಿಬರಲಾರಂಭಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments