Webdunia - Bharat's app for daily news and videos

Install App

ಪುಣೆಯಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಬರುತ್ತಾರಾ?

Webdunia
ಶುಕ್ರವಾರ, 1 ಮೇ 2020 (16:51 IST)
ಕೊರೊನಾ ಹಾಟ್ ಸ್ಪಾಟ್ ಆಗಿ ಮಹಾರಾಷ್ಟ್ರ ಪರಿವರ್ತನೆಗೊಂಡಿದೆ. ಆದರೆ ಪುಣೆಯಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕೆ ರೆಡಿಯಾಗ್ತಿದ್ದಾರೆ. 

ಹೊರ ರಾಜ್ಯದಿಂದ ಜನರು ಆಗಮಿಸಲು ಅನುಮತಿ ಸಿಗುವ ಕುರಿತು ಶೀಘ್ರ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಕೊರೊನಾ ಸಂಬಂಧಿತ ಲಾಕ್‍ಡೌನ್ ಹಿನ್ನೆಲೆ ಇತರ ರಾಜ್ಯಗಳಲ್ಲಿ ನೆಲೆಸಿರುವ ಜನರು ಇದೀಗ ತಮ್ಮ ಊರಿಗೆ ಬರಲು ತವಕ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಹೊರ ರಾಜ್ಯದಲ್ಲಿ ನೆಲೆಸಿರುವ ಮೂಲ ಕರ್ನಾಟಕದವರನ್ನು ಕರೆಸಿಕೊಳ್ಳುವ ಬಗ್ಗೆ ಹಾಗೂ ಅಂತರ ರಾಜ್ಯ ಗಡಿಯನ್ನ ಮುಕ್ತ ಗೊಳಿಸುವ ಬಗ್ಗೆ ಅನುಮತಿ ನೀಡಿದೆ. ಈ ಬಗ್ಗೆ ನಿಯಮಾವಳಿಗಳು ರಚನೆಯಾಗುತ್ತಿದ್ದು, ಉಡುಪಿ ಜಿಲ್ಲಾಡಳಿತ ಹಾಗೂ ರಾಜ್ಯದ ಆಡಳಿತ ನಡುವೆ ನಿರಂತರ ಸಂಪರ್ಕದಲ್ಲಿ ನಾವಿದ್ದೇವೆ ಎಂದು ಶಾಸಕ ವಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

ತುರ್ತು ಅಗತ್ಯವಿರುವವರಿಗೆ ಖಂಡಿತ ಊರಿಗೆ ಬರಲು ಅನುಮತಿ ಮಾಡಿಕೊಡುತ್ತೇವೆ. ಈ ಕುರಿತು ಯಾರೂ ತರಾತುರಿ ಮಾಡದೇ ಎಲ್ಲರೂ ಸಹಕರಿಸಬೇಕು ಎಂದು ಮುಂಬೈ, ಪುಣೆಯಲ್ಲಿ ನೆಲೆಸಿರುವ ಕನ್ನಡಿಗರನ್ನ ಉದ್ದೇಶಿಸಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಶಾಸಕ ವಿ ಸುನೀಲ್ ಕುಮಾರ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments