Webdunia - Bharat's app for daily news and videos

Install App

ಸಿಎಂ ಪಾಲ್ಗೊಳ್ಳುವ ಸಭೆಯಿಂದ ದೂರ ಉಳಿಯಲು ಕೈ ಶಾಸಕರು ನಿರ್ಧಾರ?

Webdunia
ಬುಧವಾರ, 12 ಡಿಸೆಂಬರ್ 2018 (19:37 IST)
ವಿಧಾನಮಂಡಲದ ಅಧಿವೇಶನ ಮುಗಿದ ನಂತರ ಸಂಪುಟ ವಿಸ್ತರಣೆಯಾಗಲೇಬೇಕು ಎಂದು ಬಿಗಿ ಪಟ್ಟು ಹಿಡಿದಿರುವ ಕಾಂಗ್ರೆಸ್ ಸಚಿವಾಕಾಂಕ್ಷಿ ಶಾಸಕರುಗಳು ಮುಖ್ಯಮಂತ್ರಿ ಕುಮಾರಸ್ವಾಮಿ ಪಾಲ್ಗೊಳ್ಳಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಬೇಕೇ, ಇಲ್ಲವೇ, ಸಂಪುಟ ವಿಸ್ತರಣೆಯಾಗುವವರೆಗೂ ಶಾಸಕಾಂಗ ಪಕ್ಷದ ಸಭೆಯಿಂದ ದೂರ ಉಳಿಯಬೇಕೇ ಎಂಬ ಬಗ್ಗೆ ಚಿಂತನ-ಮಂಥನದಲ್ಲಿ ತೊಡಗಿದ್ದಾರೆ.

ಒಂದಲ್ಲ ಒಂದು ನೆಪ ಹೇಳಿ ಕಳೆದ ಆರು ತಿಂಗಳಿಂದ ಸಂಪುಟ ವಿಸ್ತರಣೆಯನ್ನು ಮುಂದಕ್ಕೆ ಹಾಕುತ್ತಿರುವುದರಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ಶಾಸಕರುಗಳು ವಿಧಾನಮಂಡಲದ ಅಧಿವೇಶನ ಸಂದರ್ಭದಲ್ಲಿ ಸಂಪುಟ ವಿಸ್ತರಣೆಯ ಒತ್ತಡವನ್ನು ಹೇರುವ ಸಂಬಂಧ ಚರ್ಚೆ ನಡೆಸಿದ್ದು  ಇಂದು ಇಲ್ಲ ನಾಳೆ ಸಚಿವಾಕಾಂಕ್ಷಿ ಶಾಸಕರುಗಳೆಲ್ಲರೂ ಒಟ್ಟಾಗಿ ಸಭೆ ಸೇರಲಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿ ರಾಜಕೀಯ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಆದರೆ, ಸಭೆಯಿಂದ ದೂರ ಉಳಿದು ಸಂಪುಟ ವಿಸ್ತರಣೆಗೆ ಒತ್ತಡ ಹೇರುವ ತಂತ್ರವನ್ನು ಸಚಿವಾಕಾಂಕ್ಷಿಗಳು ಅನುಸರಿಸಲಿದ್ದಾರೆ. ಆದರೆ ಇದಕ್ಕೆ ಒಪ್ಪದ ಕೆಲ ಶಾಸಕರು ಶಾಸಕಾಂಗ ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಬಗ್ಗೆ ತೋರುತ್ತಿರುವ ತಾರತಮ್ಯ ನೀತಿ ಎತ್ತಿ ತೋರುವುದು ಸೂಕ್ತ ಎಂಬುದು ಕೆಲವರ ಅಭಿಪ್ರಾಯವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಬಾರಿ ಮುಂಗಾರು ಹೊಸ ದಾಖಲೆ ಮಾಡಲಿದೆ, ಏನಿದರ ವಿಶೇಷ ನೋಡಿ

India Pakistan: ಸಿಂಧೂ ನದಿ ನಿಲ್ಲಿಸಿದ್ರೆ ನಿಮ್ಮ ಉಸಿರನ್ನೂ ನಿಲ್ಲಿಸ್ತೇವೆ ಎಂದು ಎಚ್ಚರಿಕೆ ಕೊಟ್ಟ ಪಾಕಿಸ್ತಾನ ಸೇನಾ ವಕ್ತಾರ

Karnataka Weather: ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಹವಾಮಾನ ವರದಿ ತಪ್ಪದೇ ಗಮನಿಸಿ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

ಮುಂದಿನ ಸುದ್ದಿ
Show comments