Webdunia - Bharat's app for daily news and videos

Install App

ಮುಖ್ಯಮಂತ್ರಿಯಾಗಿ ಐದು ವರ್ಷ ಪೂರೈಸಲು ಕಾಂಗ್ರೆಸ್‌ ಗೆಲ್ಲಿಸಿ: ಸಿದ್ದರಾಮಯ್ಯ ಮನವಿ

Sampriya
ಭಾನುವಾರ, 5 ಮೇ 2024 (10:28 IST)
ದಾವಣಗೆರೆ: ತಾನು ಮುಖ್ಯಮಂತ್ರಿಯಾಗಿ ಐದು ವರ್ಷ ಪೂರೈಸುವುದಕ್ಕಾಗಿ ಕುರುಬ ಸಮುದಾಯದವರು ಕಾಂಗ್ರೆಸ್‌ಗೆ ಮತ ನೀಡಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಲೋಕಸಭೆ ಚುನಾವಣೆ ಅಂಗವಾಗಿ ನಗರದಲ್ಲಿ ಶನಿವಾರ ಕುರುಬ ಸಮುದಾಯದವರು ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದರೆ ನೀವು ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ನ ಹೆಚ್ಚು ಅಭ್ಯರ್ಥಿಗಳು ಗೆದ್ದರೆ ಸಿದ್ದರಾಮಯ್ಯ ನಾಯಕತ್ವಕ್ಕೆ ಹೆಸರು ಬರುತ್ತದೆ ಅಲ್ಲವೇ? ನನ್ನ ನಾಯಕತ್ವ ಉಳಿಯುತ್ತದೆ ಅಲ್ಲವೇ? ಎಂದು ಅವರು ಪ್ರಶ್ನಿಸಿದರು.

ಮುಖ್ಯಮಂತ್ರಿಯಾದ ನಿಮ್ಮ ಸಮುದಾಯದ ನಾನು ಬೇಕಾ, ಇಲ್ಲ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್‌ಕುಮಾರ್ ಬೇಕಾ ನೀವೇ ನಿರ್ಧರಿಸಿ. ವಿನಯ್‌ಗೆ ಒಂದೂ ಮತ ಕೊಡಬಾರದು ಎಂದೂ ಅವರು ಇದೇ ವೇಳೆ ಕೋರಿದರು.

ವಿನಯ್‌ ಕುರುಬ ಸಮುದಾಯದವರು ಎಂದು ಮತ ನೀಡಬೇಕಾ? ಒಂದು ಜಾತಿಯ ಮತದಿಂದ ಯಾವುದಾದರೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವೇ? ನೀವೇ ಹೇಳಿ. ಅವರಿಗೆ ಮುಂದೆ ಭವಿಷ್ಯವಿದೆ. ಈಗ ಸ್ಪರ್ಧೆಯಿಂದ ಹಿಂದೆ ಸರಿಯಿರಿ ಎಂದು ಹೇಳಿದರೂ ಕೇಳಲಿಲ್ಲ. ಅಂತಹವರಿಗೆ ನೀವು ಮತ ಹಾಕುವಿರಾ? ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments