ಜ್ಞಾನದ ಜೊತೆ ಬುದ್ಧಿವಂತಿಕೆ ಅಗತ್ಯ- ಸಚಿವ ರಾಜನಾಥ್​​ ಸಿಂಗ್

Webdunia
ಶನಿವಾರ, 19 ನವೆಂಬರ್ 2022 (20:02 IST)
ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ಯಾರ ಜೊತೆಗು ಗಲಾಟೆ ತೆಗೆಯುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ. ಇಡೀ ಜಗತ್ತೇ ಭಾರತದ ಮಾತು ಕೇಳುವ ಕಾಲ ಬಂದಿದೆ ಎಂದು ಉಡುಪಿಯಲ್ಲಿ ಕೇಂದ್ರ ರಕ್ಷಣಾ ಇಲಾಖೆ ಸಚಿವ ರಾಜನಾಥ್​​ ಸಿಂಗ್ ಹೇಳಿದ್ದಾರೆ. ಉಡುಪಿ ಜಿಲ್ಲೆ ಮಣಿಪಾಲ ಪಟ್ಟದಲ್ಲಿರುವ ಮಾಹೆ ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಹಾಗೆ 5 ಜನ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಬಳಿಕ ಮಾತನಾಡಿದ ಅವರು, ವಿಶ್ವದ 3ನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಂತಿದೆ. 2047ರ ವೇಳೆಗೆ ಭಾರತ ಮೊದಲ ಸ್ಥಾನದಲ್ಲಿ ನಿಲ್ಲಲಿದೆ. ಮಾಹೆ ವಿವಿಯ ಸತ್ಯ ನಾಡೆಲ್ಲಾ ಮೈಕೋಸಾಫ್ಟ್​​ನ ನೇತೃತ್ವ ವಹಿಸಿದ್ದಾರೆ ಎಂದು ತಿಳಿಸಿದರು. ಮೈಕ್ರೋಸಾಫ್ಟ್​​ನ್ನು ಮೀರಿಸುವಂತಹ ಕಂಪನಿ ಭಾರತದಲ್ಲಿ ಸ್ಥಾಪನೆ ಆಗಬೇಕು. ಅಂತಾರಾಷ್ಟ್ರೀಯ ಕಂಪನಿ CEOಗಳು ಭಾರತ ಮೂಲದವರು ಎಂಬುವುದು ನಮ್ಮ ಹೆಗ್ಗಳಿಕೆ. ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆ ಬುದ್ದಿವಂತಿಕೆಯು ಅಗತ್ಯ. ರಾಮನಿಗಿಂತ ರಾವಣ ಜ್ಞಾನಿಯಾಗಿದ್ದ. ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ. ಸಂಸ್ಕೃತಿ ಮತ್ತು ಸಂಪ್ರದಾಯ ಇಲ್ಲದ ನಾಗರಿಕ ಜೀವನಕ್ಕೆ ಅರ್ಥ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments